Don't Miss!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಬರ್ಟ್' ನಿರ್ಮಾಪಕನಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ರಾಬರ್ಟ್' ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಸುದ್ದಿ ವರದಿಯಾಗಿದೆ.
Recommended Video
ಕಳೆದ ವರ್ಷ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಸಹೋದರ ದೀಪಕ್ ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದಲ್ಲಿ ಏಳು ಜನರನ್ನು ಬಂಧಿಸಲಾಗಿತ್ತು. ಹತ್ಯೆಗೆ ಸ್ಕೆಚ್ ಹಾಕಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಮಂಜುನಾಥ್, ಭರತ್ ಕುಮಾರ್ ಸೇರಿದಂತೆ ಏಳು ಜನರನ್ನು ಅರೆಸ್ಟ್ ಮಾಡಿದ್ದರು.
'ರಾಬರ್ಟ್' ನಿರ್ಮಾಪಕ ಉಮಾಪತಿ ಸೇರಿ ನಾಲ್ವರ ಕೊಲೆಗೆ ಸ್ಕೆಚ್: 7 ಜನ ವಶಕ್ಕೆ
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಪ್ರಮುಖ ಆರೋಪಿ ಎಂದು ತಿಳಿದ ಪೊಲೀಸರು 'ಆಪರೇಷನ್ ಬ್ಲಾಕ್ ಡಾಗ್' ಎಂಬ ಹೆಸರಿನಲ್ಲಿ ಶೋಧ ಮುಂದುವರಿಸಿದ್ದರು.
ಇದೀಗ, ಆರೋಪಿ ರಾಜೇಶ್ನನ್ನು ದಕ್ಷಿಣ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಬೆ ರವಿ ತಂಡದ ಸದಸ್ಯನಾಗಿದ್ದ ರಾಜೇಶ್ ನೇಪಾಳದಲ್ಲಿದ್ದ ತಲೆಮರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಬಾಂಬೆ ರವಿ ಮತ್ತು ಸಹಚರರು ಬೆಂಗಳೂರಿನಿಂದ ಹೊರಗಡೆ ಇದ್ದುಕೊಂಡೆ, ಉದ್ಯಮಿಗಳಿಗೆ ಧಮ್ಕಿ ಹಾಕಿ ಹಣ ವಸೂಲಿ ಮಾಡುವುದು, ದರೋಡೆ ಮಾಡುವುದು ವೃತ್ತಿ ಮಾಡಿಕೊಂಡಿದ್ದರು. ಭೂಗತ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.
ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಸಹೋದರ ದೀಪಕ್, ಸೈಕಲ್ ರವಿ, ಬೇಕರಿ ರಘು ನಾಲ್ವರನ್ನು ಹತ್ಯೆ ಮಾಡುವುದಾಗಿ ಕರಿಯ ರಾಜೇಶ್ ಧಮ್ಕಿ ಹಾಕಿದ್ದ. ಇತ್ತ ಸಹಚರರು ಬಂಧನವಾಗುತ್ತಿದ್ದಂತೆ ಬೆಂಗಳೂರಿನಿಂದ ಓಡಿಹೋಗಿದ್ದ ರಾಜೇಶ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಾರ್ಚ್ 11, 2021ರಂದು ರಾಬರ್ಟ್ ಸಿನಿಮಾ ತೆರೆಕಂಡು ಭರ್ಜರಿ ಬಿಸಿನೆಸ್ ಮಾಡಿತ್ತು. ದರ್ಶನ್, ಆಶಾ ಭಟ್, ವಿನೋದ್ ಪ್ರಭಾಕರ್, ಜಗಪತಿ ಬಾಬು ಸೇರಿದಂತೆ ಹಲವರು ನಟಿಸಿದ್ದರು. ತರುಣ್ ಸುಧೀರ್ ಈ ಚಿತ್ರ ನಿರ್ದೇಶಿಸಿದ್ದರು.