Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖತರ್ನಾಕ್ ಉಮೇಶ್ ರೆಡ್ಡಿಯ Alive Story
ಇತ್ತೀಚೆಗೆ 'ಉಮೇಶ್' ಎಂಬ ಚಿತ್ರ ಬಿಡುಗಡೆಯಾಗಿದ್ದು ಗೊತ್ತೇ ಇದೆ. ಆ ಚಿತ್ರಕ್ಕೆ ಯಾವ ವಿಮರ್ಶಕರು 2 ಸ್ಟಾರ್ ಮೇಲೆ ರೇಟಿಂಗ್ ಕೊಡಲಿಲ್ಲ. ಈಗ ಮತ್ತೊಂದು ಚಿತ್ರ 'ಉಮೇಶ್ ರೆಡ್ಡಿ' ಹೆಸರಿನಲ್ಲಿ ಬರುತ್ತಿದೆ.
ಉಮೇಶ್ ಚಿತ್ರಕ್ಕೆ ವ್ಯಕ್ತವಾದ ನೀರಸ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು ಉಮೇಶ್ ರೆಡ್ಡಿ ಚಿತ್ರದ ಟೈಟಲನ್ನು ಬದಲಾಯಿಸಲಾಗಿದೆ. ಈಗ ಚಿತ್ರಕ್ಕೆ 'ಖತರ್ನಾಕ್' ಎಂದು ಹೆಸರಿಡಲಾಗಿದೆ. ಆದರೆ ಚಿತ್ರದ ಅಡಿಬರಹವನ್ನು ಉಮೇಶ್ ರೆಡ್ಡಿ Alive Story ಎಂದು ಇಡಲಾಗಿದೆ.
ಇನ್ನು 'ಖತರ್ನಾಕ್' ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನವನ್ನು ಮಳವಳ್ಳಿ ಸಾಯಿಕೃಷ್ಣ ಮಾಡಿದ್ದಾರೆ. ಈ ಚಿತ್ರವನ್ನು ಆದಿತ್ಯ ರಮೇಶ್ ನಿರ್ಮಿಸಿದ್ದಾರೆ. ಸಾಧು ಕೋಕಿಲ ಅವರ ಸಂಗೀತ ಚಿತ್ರಕ್ಕಿದೆ.
ಚಿತ್ರದಲ್ಲಿ ಉಮೇಶ್ ರೆಡ್ಡಿಯಾಗಿ ನಟ ರವಿ ಕಾಳೆ ಕಾಣಿಸಲಿದ್ದಾರೆ. ಈಗಾಗಲೆ ಅವರು ವಿಲನ್, ಪೊಲೀಸ್ ಪಾತ್ರಗಳಿಂದ ಕನ್ನಡ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಈಗವರು ವಿಕೃತಕಾಮಿಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೊಂದು ಚಾಲೆಂಜಿಂಗ್ ರೋಲ್ ಎನ್ನುತ್ತಾರೆ ರವಿ ಕಾಳೆ.
ಅಂದಹಾಗೆ ಉಮೇಶ್ ರೆಡ್ಡಿ ಹುಟ್ಟಿ ಬೆಳೆದದ್ದೆಲ್ಲಾ ಚಿತ್ರದುರ್ಗದಲ್ಲಿ. ಹಾಗಾಗಿ ನಿರ್ದೇಶಕರು ಅಲ್ಲೇ ಮುಹೂರ್ತ ನೆರವೇರಿಸಿದ್ದರು. ಹಾಗೆಯೇ ಆತ ಎಲ್ಲೆಲ್ಲಿ ಅಪರಾಧಗಳನ್ನು ಎಸೆದಿದ್ದಾನೋ ಅಲ್ಲಲ್ಲೇ ಚಿತ್ರೀಕರಿಸುವುದಾಗಿಯೂ ತಿಳಿಸಿದ್ದಾರೆ.
ಉಮೇಶ್ ರೆಡ್ಡಿಯ ಅಪರಾಧಗಳ ಜಾಡನ್ನು ಹುಡುಕುತ್ತಾ ಹೊರಟರೆ ಕಾಶ್ಮೀರ, ಪುಣೆಯಲ್ಲೂ ಚಿತ್ರೀಕರಣ ಮಾಡಬೇಕಾಗುತ್ತದೆ. ತಾವು ಅದಕ್ಕೂ ಸಿದ್ಧ ಎನ್ನುತ್ತಾರೆ ಚಿತ್ರದ ನಿರ್ಮಾಪಕ ರಮೇಶ್. ಚಿತ್ರದ ಪ್ರಮುಖ ಪಾತ್ರದಲ್ಲಿ ರೂಪಿಕಾ ಅಭಿನಯಿಸುತ್ತಿದ್ದಾರೆ. (ಏಜೆನ್ಸೀಸ್)