Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಶಿನಾಥ್ ಹುಟ್ಟುಹಬ್ಬ: ಗುರುವಿಗೆ ಶುಭಾಶಯ ಹೇಳಿದ ಉಪೇಂದ್ರ ಮತ್ತು ತರುಣ್ ಸುಧೀರ್
ಸ್ಯಾಂಡಲ್ ವುಡ್ ಖ್ಯಾತ ನಟ ಮತ್ತು ನಿರ್ದೇಶಕ ಕಾಶಿನಾಥ್ ಅವರ ಹುಟ್ಟುಹಬ್ಬ. ಇಂದು 69ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನಲೆ ಅವರ ಅವರ ಶಿಷ್ಯರಾದ ಉಪೇಂದ್ರ ಹಾಗೂ ನಿರ್ದೇಶಕ ತರುಣ್ ಸುಧೀರ್ ಕಾಶಿನಾಥ್ ಅವರನ್ನು ಸ್ಮರಿಸಿದ್ದಾರೆ.
Recommended Video
ಚಿತ್ರರಂಗದಲ್ಲಿ ಹೊಸ ಅಲೆಯನ್ನಬ್ಬಿದ ನಟ ಕಾಶಿನಾಥ್, ನಟನಾಗಿ, ನಿರ್ದೇಶಕನಾಗಿ ಮತ್ತು ಸಂಗೀತ ನಿರ್ದೇಶನದಲ್ಲೂ ತಮ್ಮದೆ ಆದ ಛಾಪು ಮೂಡಿಸಿದ್ದರು. 43 ಚಿತ್ರಗಳಲ್ಲಿ ಬಣ್ಣಹಚ್ಚಿರುವ ಕಾಶಿನಾಥ್ ಕನ್ನಡದಲ್ಲಿ 13 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕಾಶಿನಾಥ್ 2018ರಲ್ಲಿ ನಿಧನರಾಗಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಕಾಶಿನಾಥ್ ಅವರಿಗೆ ದೊಡ್ಡ ಶಿಷ್ಯ ಬಳಗವಿದೆ. ಕಾಶಿನಾಥ್ ಗರಡಿಯಲ್ಲಿ ಪಳಗಿದ ನಟ ಮತ್ತು ನಿರ್ದೇಶಕ ಉಪೇಂದ್ರ ಇಂದು ಗುರುವನ್ನು ನೆನಪಿಸಿಕೊಂಡಿದ್ದಾರೆ. ಚಿತ್ರರಂಗದಲ್ಲಿ ದಾರಿತೋರಿದ ಗುರುವಿಗೆ ಸಮಾಜಿಕ ಜಾಲತಾಣದಲ್ಲಿ ಶುಭಕೋರಿದ್ದಾರೆ.
"ಅರಿವು ಮೂಡಿಸಿದ ಗುರು. ಜನ್ಮದಿನದ ಶುಭಾಶಯಗಳು" ಎಂದು ಗುರುವಿಗೆ ಶುಭಾಶಯ ತಿಳಿಸಿದ್ದಾರೆ.
ಇನ್ನೂ ನಿರ್ದೇಶಕ ತರುಣ್ ಸುಧೀರ್ ಸಹ ಸಾಮಾಜಿಕ ಜಾಲತಾಣದಲ್ಲಿ ಶುಭ ಕೋರಿದ್ದಾರೆ. "ಹುಟ್ಟುಹಬ್ಬದ ಶುಭಾಶಯಗಳು ಕಾಶಿ ಸರ್. ನಿಮ್ಮ ಜೊತೆ ಕೆಲಸ ಮಾಡಿದ್ದು ನನ್ನ ಸ್ಮರಣೀಯ ಕ್ಷಣ. ನಿಮ್ಮನ್ನು ತುಂಬ ಮಿಸ್ ಮಾಡಿಕೊಳ್ಳುತ್ತೇನೆ" ಎಂದು ವಿಶ್ ಮಾಡಿ ಕಾಶಿನಾಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ ಚೌಕ ಸಿನಿಮಾದಲ್ಲಿ ಕಾಶಿನಾಥ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚೌಕ ಸಿನಿಮಾದಲ್ಲಿ ಕಾಶಿನಾಥ್ ಪಾತ್ರ ಸಿನಿಪ್ರಿಯರ ಮೆಚ್ಚುಗೆ ಪಡೆದಿತ್ತು.