Don't Miss!
- Lifestyle
ಫೆಬ್ರವರಿಯಲ್ಲಿದೆ ಈ 3 ಗ್ರಹಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ
- Sports
IND vs NZ 2nd T20: ಭಾರತಕ್ಕೆ ಸಾಧಾರಣ ಗುರಿ ನೀಡಿದ ನ್ಯೂಜಿಲೆಂಡ್
- News
Breaking: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡಿನ ದಾಳಿ: ಆಸ್ಪತ್ರೆಯಲ್ಲಿ ಓಡಿಶಾ ಆರೋಗ್ಯ ಸಚಿವ ಸಾವು
- Finance
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿದ ಬ್ಯಾಂಕ್ ಯೂನಿಯನ್ಸ್: ಜ.31ಕ್ಕೆ ಮಹತ್ವದ ಸಭೆ
- Technology
ಬಜೆಟ್ ಬೆಲೆಯಲ್ಲಿ ಈ ಸ್ಮಾರ್ಟ್ಫೋನ್ಗಳು ಬೆಸ್ಟ್ ಎನಿಸಿಲಿವೆ! ಜಬರ್ದಸ್ತ್ ಫೀಚರ್ಸ್!
- Automobiles
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕೆ ಮಂಜು ಮಗನ 'ರಾಣ' ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್
ಕನ್ನಡದ ಖ್ಯಾತ ನಿರ್ಮಾಪಕ ಕೆ ಮಂಜು ಅವರ ಪುತ್ರ ಹೊಸ ಸಿನಿಮಾ ಆರಂಭಿಸಿದ್ದಾರೆ. 'ಪೊಗರು' ಚಿತ್ರದ ನಿರ್ದೇಶಕ ನಂದಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, 'ರಾಣ' ಎಂದು ಟೈಟಲ್ ಇಡಲಾಗಿದೆ. ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡಲಿದ್ದಾರೆ.
ಇತ್ತೀಚಿಗಷ್ಟೆ ಸಿನಿಮಾದ ಶೀರ್ಷಿಕೆಯನ್ನ ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ, ಜುಲೈ 7 ರಂದು ಸಿನಿಮಾ ಮುಹೂರ್ತ ನಡೆಯಲಿದ್ದು, ಕನ್ನಡ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ಕೊಡುತ್ತಿದ್ದಾರೆ.
'ಪೊಗರು'
ನಂತರ
ಯುವನಟನಿಗೆ
ಆಕ್ಷನ್-ಕಟ್
ಹೇಳಲಿರುವ
ನಂದ
ಕಿಶೋರ್
ಹೌದು, ರಾಣ ಚಿತ್ರದ ಮುಹೂರ್ತ ಸಮಾರಂಭಕ್ಕೆ ಸೂಪರ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಬುಧವಾರ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಮುಹೂರ್ತ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ಉಪೇಂದ್ರ, ಕಂಪ್ಲಿ ಶಾಸಕ ಜೆಎನ್ ಗಣೇಶ್ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಭಾಗಿಯಾಗಲಿದ್ದಾರೆ.
ರೇಶ್ಮಾ ನಾಣಯ್ಯ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ಒದಗಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ ಒಳಗೊಂಡಿದೆ. ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.
ಮತ್ತೊಂದೆಡೆ ಧ್ರುವ ಸರ್ಜಾ ಜೊತೆ 'ದುಬಾರಿ' ಸಿನಿಮಾ ಮಾಡಬೇಕಿದ್ದ ನಂದಕಿಶೋರ್ ಕಾರಣಾಂತರಗಳಿಂದ ಈ ಪ್ರಾಜೆಕ್ಟ್ ಕೈಬಿಟ್ಟಿದ್ದಾರೆ. ಈ ಸಿನಿಮಾ ಬದಲು ಈಗ ರಾಣ ಕೈಗೆತ್ತಿಕೊಂಡಿದ್ದು, ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿದ್ದಾರೆ.
ಯಶ್ ಮಾಡಬೇಕಿತ್ತು ರಾಣ?
Recommended Video
ಅಂದ್ಹಾಗೆ, ರಾಣ ಹೆಸರಿನಲ್ಲಿ ನಟ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಬಹಳ ವರ್ಷದಿಂದ ಚರ್ಚೆಯಲ್ಲಿದೆ. ನಿರ್ದೇಶಕ ಹರ್ಷ ಈ ಸಿನಿಮಾ ನಿರ್ದೇಶಿಸುವ ಬಗ್ಗೆ ವರದಿಯಾಗಿತ್ತು. ನಂತರ ರಾಣ ಟೈಟಲ್ ಹಕ್ಕನ್ನು ಗುಜ್ಜಲ್ ಪುರುಷೋತ್ತಮ್ ಖರೀದಿ ಮಾಡಿದ್ದಾರೆ.