Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ ಮಂಜು ಮಗನ 'ರಾಣ' ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್
ಕನ್ನಡದ ಖ್ಯಾತ ನಿರ್ಮಾಪಕ ಕೆ ಮಂಜು ಅವರ ಪುತ್ರ ಹೊಸ ಸಿನಿಮಾ ಆರಂಭಿಸಿದ್ದಾರೆ. 'ಪೊಗರು' ಚಿತ್ರದ ನಿರ್ದೇಶಕ ನಂದಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, 'ರಾಣ' ಎಂದು ಟೈಟಲ್ ಇಡಲಾಗಿದೆ. ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡಲಿದ್ದಾರೆ.
ಇತ್ತೀಚಿಗಷ್ಟೆ ಸಿನಿಮಾದ ಶೀರ್ಷಿಕೆಯನ್ನ ಬೆಂಗಳೂರಿನ ಗಣಪತಿ ದೇವಸ್ಥಾನದಲ್ಲಿ ಅನಾವರಣಗೊಳಿಸಲಾಗಿತ್ತು. ಇದೀಗ, ಜುಲೈ 7 ರಂದು ಸಿನಿಮಾ ಮುಹೂರ್ತ ನಡೆಯಲಿದ್ದು, ಕನ್ನಡ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ಕೊಡುತ್ತಿದ್ದಾರೆ.
'ಪೊಗರು' ನಂತರ ಯುವನಟನಿಗೆ ಆಕ್ಷನ್-ಕಟ್ ಹೇಳಲಿರುವ ನಂದ ಕಿಶೋರ್
ಹೌದು, ರಾಣ ಚಿತ್ರದ ಮುಹೂರ್ತ ಸಮಾರಂಭಕ್ಕೆ ಸೂಪರ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಬುಧವಾರ ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಮುಹೂರ್ತ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ಉಪೇಂದ್ರ, ಕಂಪ್ಲಿ ಶಾಸಕ ಜೆಎನ್ ಗಣೇಶ್ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಭಾಗಿಯಾಗಲಿದ್ದಾರೆ.
ರೇಶ್ಮಾ ನಾಣಯ್ಯ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ಒದಗಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ ಒಳಗೊಂಡಿದೆ. ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.
ಮತ್ತೊಂದೆಡೆ ಧ್ರುವ ಸರ್ಜಾ ಜೊತೆ 'ದುಬಾರಿ' ಸಿನಿಮಾ ಮಾಡಬೇಕಿದ್ದ ನಂದಕಿಶೋರ್ ಕಾರಣಾಂತರಗಳಿಂದ ಈ ಪ್ರಾಜೆಕ್ಟ್ ಕೈಬಿಟ್ಟಿದ್ದಾರೆ. ಈ ಸಿನಿಮಾ ಬದಲು ಈಗ ರಾಣ ಕೈಗೆತ್ತಿಕೊಂಡಿದ್ದು, ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿದ್ದಾರೆ.
ಯಶ್ ಮಾಡಬೇಕಿತ್ತು ರಾಣ?
Recommended Video
ಅಂದ್ಹಾಗೆ, ರಾಣ ಹೆಸರಿನಲ್ಲಿ ನಟ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಬಹಳ ವರ್ಷದಿಂದ ಚರ್ಚೆಯಲ್ಲಿದೆ. ನಿರ್ದೇಶಕ ಹರ್ಷ ಈ ಸಿನಿಮಾ ನಿರ್ದೇಶಿಸುವ ಬಗ್ಗೆ ವರದಿಯಾಗಿತ್ತು. ನಂತರ ರಾಣ ಟೈಟಲ್ ಹಕ್ಕನ್ನು ಗುಜ್ಜಲ್ ಪುರುಷೋತ್ತಮ್ ಖರೀದಿ ಮಾಡಿದ್ದಾರೆ.