ಬೆಸ್ಕಾಂಗೆ ರಿಯಲ್ ಸ್ಟಾರ್ ಉಪೇಂದ್ರ ರಾಯಭಾರಿ
ಈಗಾಗಲೆ ಹಲವಾರು ಉತ್ಪನ್ನಗಳಿಗೆ ರಾಯಭಾರಿ ಆಗಿ ಕಾರ್ಯನಿರ್ವಹಿಸಿರುವ ರಿಯಲ್ ಸ್ಟಾರ್ ಉಪೇಂದ್ರ ಈಗ ಮತ್ತೊಂದು ಸಂಸ್ಥೆಗೆ ರಾಯಭಾರಿಯಾಗಲು ಹೊರಟಿದ್ದಾರೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ.
ಎಲ್ಲವೂ ಮಾತುಕತೆ ಹಂತದಲ್ಲಿದ್ದು ಉಪ್ಪಿ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ. ಇನ್ನೇನಿದ್ದರೂ ಒಪ್ಪಂದ ಪತ್ರಗಳಿಗೆ ಸಹಿ ಹಾಕುವುದೊಂದು ಬಾಕಿ ಇದೆ.
ಈಗಾಗಲೆ ನಗರಪ್ರದೇಶಗಳಲ್ಲೂ ತೀವ್ರ ವಿದ್ಯುತ್ ಕೊರತೆ ಎದುರಾಗಿದೆ, ಹಳ್ಳಿಗಳ ಪರಿಸ್ಥಿತಿ ಕೇಳುವಂತೆಯೇ ಇಲ್ಲ ಬಿಡಿ. ಈ ಹಿನ್ನೆಲೆಯಲ್ಲಿ ವಿದ್ಯುತ್ ಉಳಿತಾಯದ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಬೆಸ್ಕಾಂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಇದರ ಜೊತೆಗೆ ಕೆಲವು ಷರತ್ತುಗಳನ್ನು ಬೆಸ್ಕಾಂ ಹಾಕಿದೆ. ಅವಕ್ಕೂ ಉಪೇಂದ್ರ ಓಕೆ ಎಂದಿದ್ದಾರೆ. ಅದರ ಪ್ರಕಾರ, ಉಪ್ಪಿ ಕುಟುಂಬ ಸಮೇತ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕು. ಒಪ್ಪಂದ ಮಾಡಿಕೊಂಡ 1 ವರ್ಷದ ತನಕ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವಂತಿಲ್ಲ.
ಉಪೇಂದ್ರ ಈಗಾಗಲೆ ಯುನೈಟೆಡ್ ಬ್ರೀವರೀಸ್, ಲೂನಾರ್ಸ್, ಇಮಾಮಿ ನವರತ್ನನ ಬ್ರ್ಯಾಂಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಬೆಸ್ಕಾಂ ರಾಯಭಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಾ ಓಕೆ ಕೂಲ್ ಡ್ರಿಂಕ್ ಯಾಕೆ ಎಂದ ಉಪ್ಪಿ ಈ ಬಾರಿ ಏನಂತಾರೋ? (ಏಜೆನ್ಸೀಸ್)


Click it and Unblock the Notifications












