Don't Miss!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಅಖಾಡಕ್ಕೆ ಎಂಟ್ರಿ ಕೊಟ್ಟ ಉಪೇಂದ್ರ, ಯಾರ ಪರ ಪ್ರಚಾರ ಮಾಡಿದ್ರು?
ರಾಷ್ಟ್ರ ರಾಜಕಾರಣದಲ್ಲಿ ಮಂಡ್ಯ ಲೋಕಸಭೆ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಸ್ಪರ್ಧಿಸಿದ್ರೆ, ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗಾಗಲೇ ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪ್ರಚಾರ ಮಾಡ್ತಿದ್ದಾರೆ. ಇವರ ಜೊತೆ ಇನ್ನು ಕೆಲವು ತಾರೆಯರು ಮಂಡ್ಯ ಪ್ರಚಾರದಲ್ಲಿ ಭಾಗಿಯಾಗ್ತಾರೆ ಎನ್ನಲಾಗಿದೆ.
ಮಂಡ್ಯ ಎಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ಉಪೇಂದ್ರ ಹೇಳೋದೆ ಬೇರೆ
ಸುಮಲತಾ ಮತ್ತು ನಿಖಿಲ್ ಸ್ಪರ್ಧೆ ತೀರಾ ಕುತೂಹಲ ಕೆರಳಿಸಿರುವ ಸಂದರ್ಭದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಈಗ ಮಂಡ್ಯ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಸುಮಲತಾ-ನಿಖಿಲ್ ಎನ್ನುತ್ತಿರುವ ಜನರ ಮಧ್ಯೆ ಪ್ರಜಾಕೀಯ ಎಂದು ಪ್ರಚಾರ ಆರಂಭಿಸಿದ್ದಾರೆ. ಅಷ್ಟಕ್ಕೂ, ಉಪ್ಪಿ ಪ್ರಚಾರ ಮಾಡಿದ್ದು ಯಾರ ಪರ? ಮುಂದೆ ಓದಿ....
ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರ ಪತಯಾಚನೆ
ಉಪೇಂದ್ರ ಅವರು ಸ್ಥಾಪಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಸಿಪಿ ದಿವಾಕರ್ ಅವರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ದಿವಾಕರ್ ಅವರ ಪರ ಪ್ರಚಾರ ಮಾಡಲು ಉಪ್ಪಿ ಬೆಳಿಗ್ಗೆಯೇ ಮಂಡ್ಯಗೆ ಭೇಟಿ ನೀಡಿದರು.
ಮೈಸೂರಿನಲ್ಲಿ ಚುನಾವಣಾ ಕಣಕ್ಕಿಳಿದ ಉಪೇಂದ್ರ ಪಕ್ಷದ ಅಭ್ಯರ್ಥಿ
ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಮತಭೇಟೆ
ಈಗಿನಿ ರಾಜಕೀಯ ವ್ಯವಸ್ಥೆಯನ್ನ ಬದಲಿಸಿ, ಪ್ರಜಾಕೀಯವನ್ನ ತರಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ನಟ ಉಪೇಂದ್ರ ಅವರು ಎಲ್ಲೆಡೆ ಮತಯಾಚನೆ ಮಾಡುತ್ತಿದ್ದಾರೆ. ಮಂಡ್ಯದ ಪ್ರಮುಖ ನಗರಗಳಲ್ಲಿ ಜನರನ್ನ ಭೇಟಿ ಮಾಡಿ, ಉಪಿಪಿ ಅಭ್ಯರ್ಥಿಗೆ ವೋಟ್ ಮಾಡುವಂತೆ ಮನವಿ ಮಾಡ್ತಿದ್ದಾರೆ.
ಗಡ್ಡಪ್ಪನನ್ನ ಭೇಟಿ ಮಾಡಿದ ಉಪೇಂದ್ರ
ಮಂಡ್ಯದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದ ಉಪೇಂದ್ರ ಅವರಿಗೆ ಮಾರ್ಗ ಮಧ್ಯೆ ಹಿರಿಯ ನಟ ಗಡ್ಡಪ್ಪ ಕಾಣಿಸಿಕೊಂಡರು. ಈ ವೇಳೆ ಗಡ್ಡಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ, ತಮ್ಮ ಪಕ್ಷಕ್ಕೆ ವೋಟ್ ಮಾಡಿ ಎಂದು ಕೇಳಿಕೊಂಡರು.
ನಿಖಿಲ್ ಗೆ ಮಾತ್ರವಲ್ಲ ಹರಿಪ್ರಿಯಾ, ಉಪೇಂದ್ರ ಚಿತ್ರಕ್ಕೂ ರಿಲೀಸ್ ಸಮಸ್ಯೆ
ಪ್ರಚಾರದ ನಂತರ ಉಪ್ಪಿ ಹೇಳಿದ್ದೇನು?
ಇತ್ತೀಚೆಗೆ ರಾಜಕಾರಣ ವ್ಯಾಪಾರವಾಗಿಬಿಟ್ಟಿದೆ. ರಾಜಕಾರಣ ತೊಲಗಿಸಿ, ಪ್ರಜಾಕಾರಣ ತರುವ ಉದ್ದೇಶ ನಮ್ಮದು. ಜನರಿಗೆ ಕೆಲಸ ಮಾಡುವ ಉದ್ದೇಶದಿಂದ ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ನೀಡಿದ್ದೇವೆ. ಇನ್ನೂ 14 ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಆಗಬೇಕಿದೆ. ರೋಡ್ ಶೋಗಳ ಮೇಲೆ ನಮಗೆ ನಂಬಿಕೆ ಇಲ್ಲ. ಮುಂದಿನ ಪೀಳಿಗೆಗಾದರೂ ಪ್ರಜಾಕಾರಣಬೇಕು. ವಿಚಾರವೇ ಪ್ರಚಾರವಾಗಬೇಕು. ಪ್ರಸ್ತುತ ರಾಜಕಾರಣ ಬಲಿಷ್ಠವಾದ ಜನರ ಕೈಯಲ್ಲಿದೆ. ಜಾತಿ, ಹಣ ರಾಜಕೀಯ ಹೋಗಲಾಡಿಸುವ ಪ್ರಯತ್ನ ನಮ್ಮದು ಎಂದು ತಿಳಿಸಿದರು.
ಹಳ್ಳಿ ಭಾಗಕ್ಕೂ ರೀಚ್ ಆಗ್ಬೇಕು
'ಹಣ, ಹೆಸರು, ಮಸಲ್ ಪವರ್ ಇರೋ ಬಳಿ ಅಧಿಕಾರ ಸಿಕ್ಕಿ ಹಾಕಿಕೊಂಡಿದೆ. ಜ್ಞಾನ, ಶ್ರಮದ ಮೂಲಕ ಅಧಿಕಾರ ಶಾಹಿಗಳ ವಿರುದ್ಧ ಚುನಾವಣೆ ನಡೆಸಬಹುದು. ಸಿನಿಮಾ ಹಾಗೂ ಪಕ್ಷದ ಮೂಲಕ ಜನರ ಮನಃಪರಿವರ್ತನೆ ಮಾಡುವುದಕ್ಕೆ ಹೋಗುತ್ತಿದ್ದೇನೆ. ಜನರ ಜಾಗೃತಿ ನಿರಂತರವಾಗಿಸಲೂ ಪ್ರಯತ್ನ ಮಾಡುತ್ತಿದ್ದೇನೆ. ರಾಜಕೀಯ ಇರೋದು ಬ್ಯುಸಿನೆಸ್, ದುಡ್ಡು ಹಾಕಿ ದುಡ್ಡು ತೆಗೆಯೋಕಾ?.... ಸಮಾಜ ಸೇವೆ ಅನ್ನೋದೆ ಇನ್ವೆಸ್ಟ್ ಮೆಂಟ್ ಆಗಿದೆ. ಲಕ್ಷಾಂತರ ಜನ ಸೇರಿಸಿ ಸಮಾರಂಭ ಮಾಡಿದರೇ ನಾನು ಭ್ರಷ್ಟನಾಗುತ್ತೇನೆ. ನಮ್ಮ ಕನಸ್ಸನ್ನು ಈಡೇರಿಸಲು ಈಗಾಗಲೇ ಪ್ರಯತ್ನ ಮಾಡುತ್ತಿದ್ದೇನೆ. ಹಳ್ಳಿ ಭಾಗಕ್ಕೂ ರೀಚ್ ಮಾಡೋಕೆ ಮುಂದಿನ ದಿನಗಳಲ್ಲಿ ಪ್ರಯತ್ನ ನಡೆಸುತ್ತೇವೆ' ಎಂದರು.