Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ಚೆಕ್ ಹಸ್ತಾಂತರಿಸಿದ ಉಪೇಂದ್ರ
Recommended Video
ಉತ್ತರ ಕರ್ನಾಟಕದಲ್ಲಿ ಉಂಟಾದ ಭಾರಿ ಪ್ರವಾಹದಿಂದ ಅಲ್ಲಿನ ಜನ-ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸಾವಿರಾರು ಜನರು ಮನೆ, ಆಸ್ತಿ-ಪಾಸ್ತಿ ಎಲ್ಲವೂ ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಉಳಿಯಬೇಕಾಯಿತು.
ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ನೀಡಿದ ಫಿಲ್ಮ್ ಚೇಂಬರ್
ಈ ಮಧ್ಯೆ ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಸಿಎಂ ಭೇಟಿ ಮಾಡಿ ನೆರೆ ಸಂತ್ರಸ್ಥರಿಗೆ 5 ಲಕ್ಷ ಚೆಕ್ ನೀಡಿದ ಪುನೀತ್
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.