Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ಚೆಕ್ ಹಸ್ತಾಂತರಿಸಿದ ಉಪೇಂದ್ರ
Recommended Video
ಉತ್ತರ ಕರ್ನಾಟಕದಲ್ಲಿ ಉಂಟಾದ ಭಾರಿ ಪ್ರವಾಹದಿಂದ ಅಲ್ಲಿನ ಜನ-ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸಾವಿರಾರು ಜನರು ಮನೆ, ಆಸ್ತಿ-ಪಾಸ್ತಿ ಎಲ್ಲವೂ ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಉಳಿಯಬೇಕಾಯಿತು.
ಉತ್ತರ ಕರ್ನಾಟಕ ಭಾಗದ ಜನರಿಗೆ ನೆರವಾದ ಚಿತ್ರರಂಗ ದೊಡ್ಡ ಮಟ್ಟದಲ್ಲಿ ಅಗತ್ಯವಸ್ತುಗಳನ್ನ ಪೂರೈಸಿದೆ. ಅಭಿಮಾನಿ ಸಂಘಗಳು ಮತ್ತು ಕೆಲವು ಕಲಾವಿದರು ಖುದ್ದು ಅಲ್ಲಿಗೆ ಭೇಟಿ ನೀಡಿ ಸಹಾಯ ಮಾಡಿದ್ದರು.
ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ನೀಡಿದ ಫಿಲ್ಮ್ ಚೇಂಬರ್
ಈ ಮಧ್ಯೆ ನಟ-ನಿರ್ದೇಶಕ ಮತ್ತು ಪ್ರಜಾಕಾರಣಿ ಉಪೇಂದ್ರ ಅವರು ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಉಪೇಂದ್ರ 5 ಲಕ್ಷದ ಚೆಕ್ ಸಿಎಂಗೆ ಹಸ್ತಾಂತರಿಸಿದ್ದಾರೆ.
ಸಿಎಂ ಭೇಟಿ ಮಾಡಿ ನೆರೆ ಸಂತ್ರಸ್ಥರಿಗೆ 5 ಲಕ್ಷ ಚೆಕ್ ನೀಡಿದ ಪುನೀತ್
ಉಪೇಂದ್ರ ಅವರಷ್ಟೆ ಅಲ್ಲ, ಇತ್ತೀಚಿಗಷ್ಟೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 5 ಲಕ್ಷ ನೀಡಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 25 ಲಕ್ಷ ರೂಪಾಯಿ ನೆರೆ ಸಂತ್ರಸ್ಥರ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತೆಲುಗು ನಟ ಸಂಪೂರ್ಣೇಶ್ ಬಾಬು 2 ಲಕ್ಷ ನೀಡಿದ್ದರೆ, ತಮಿಳು ನಟ ಸೂರ್ಯ ಮತ್ತು ಕಾರ್ತಿ ಕೇರಳ ಮತ್ತು ಕರ್ನಾಟಕಕ್ಕೆ ತಲಾ 5 ಲಕ್ಷ ನೀಡಿದ್ದಾರೆ.