Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ನಿರ್ದೇಶಕನಿಗೆ ಸಿಕ್ತು ರಿಯಲ್ ಸ್ಟಾರ್ ಉಪೇಂದ್ರ ಕಾಲ್ ಶೀಟ್.!
Recommended Video
ಕೆ.ಪಿ.ಜೆ.ಪಿ ಪಕ್ಷದಿಂದ ಹೊರಗೆ ಬಂದ್ಮೇಲೆ, 'ಪ್ರಜಾಕೀಯ' ಪಕ್ಷ ಕಟ್ಟುವಲ್ಲಿ ಉಪೇಂದ್ರ ನಿರತರಾಗಿದ್ದಾರೆ. ಈ ನಡುವೆ ಚಿತ್ರರಂಗಕ್ಕೆ ಮರಳಿ ಬಂದಿರುವ ಉಪೇಂದ್ರ ಸಾಲು ಸಾಲು ನಿರ್ಮಾಪಕರಿಗೆ ತಮ್ಮ ಕಾಲ್ ಶೀಟ್ ನೀಡಿದ್ದಾರೆ.
ಆರ್.ಚಂದ್ರು ನಿರ್ದೇಶನ ಮಾಡುತ್ತಿರುವ 'ಐ ಲವ್ ಯು' ಚಿತ್ರದಲ್ಲಿ ಉಪೇಂದ್ರ ಅಭಿನಯಿಸುತ್ತಿರುವುದು ನಿಮಗೆಲ್ಲ ಗೊತ್ತಿದೆ. ಇದರ ಜೊತೆಗೆ 'ಡಾ ಮೋದಿ' ಸೇರಿದಂತೆ ಎರಡ್ಮೂರು ಚಿತ್ರಗಳಿಗೂ ಉಪೇಂದ್ರ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
'ಐ ಲವ್ ಯು' ಚಿತ್ರ ಮುಗಿದ ಬಳಿಕ 'ಅಧೀರ' ಚಿತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ. 'ಅಧೀರ' ಎಂಬ ಚಿತ್ರಕ್ಕೆ ಯುವ ನಿರ್ದೇಶಕ ಸಂತು ಆಕ್ಷನ್ ಕಟ್ ಹೇಳಲಿದ್ದಾರೆ. ಹಾಗ್ನೋಡಿದ್ರೆ, ಸಂತು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರ ಈ 'ಅಧೀರ'.
ರಾಜಕೀಯ ಬ್ರೇಕ್ ಆರು ಜನರಿಗೆ ಸಿಕ್ತು ಉಪ್ಪಿ ಕಾಲ್ ಶೀಟ್
'ಅಧೀರ' ಚಿತ್ರದ ಸಣ್ಣ ತುಣುಕು ರೆಡಿ ಮಾಡಿಕೊಂಡು ಉಪೇಂದ್ರ ರವರ ಜೊತೆ ಸಂತು ಮಾತುಕತೆ ನಡೆಸಿದ್ದರಂತೆ. ಸಂತು ಅವರ ಶ್ರದ್ಧೆ ಹಾಗೂ ಸೃಜನಶೀಲತೆಗೆ ಕ್ಲೀನ್ ಬೌಲ್ಡ್ ಆದ ಉಪೇಂದ್ರ ಹಿಂದು ಮುಂದು ನೋಡದೆ ಸಂತುಗೆ ಕಾಲ್ ಶೀಟ್ ಕೊಟ್ಟಿದ್ದಾರೆ.
ಆರ್.ಚಂದ್ರು ರವರ 'ಐ ಲವ್ ಯು' ಚಿತ್ರೀಕರಣ ಕಂಪ್ಲೀಟ್ ಆದ ಬಳಿಕ 'ಅಧೀರ' ಶೂಟಿಂಗ್ ಶುರುವಾಗಲಿದೆ. ಉಪೇಂದ್ರ ಸಿನಿಮಾಗಳ ಬಗ್ಗೆ ಹೆಚ್ಚಿನ ಅಪ್ಡೇಟ್ಸ್ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಓದುತ್ತಿರಿ.