Don't Miss!
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Sports RCB vs KKR: ಚಿನ್ನಸ್ವಾಮಿಯಲ್ಲಿ ಮತ್ತೊಂದು ರೋಚಕ ಪಂದ್ಯ; ಸಂಭಾವ್ಯ ಆಡುವ 11ರ ಬಳಗ, ಲೈವ್ ಸ್ಟ್ರೀಮಿಂಗ್
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಕಲ್ಪನ' ಯಶಸ್ವಿ ಅರ್ಧ ಶತಕ ನಾಟೌಟ್
'ಕಲ್ಪನ' ಚಿತ್ರತಂಡ ಈ ಸಡಗರ, ಸಂಭ್ರಮದಲ್ಲಿ ತೇಲಾಡುತ್ತಿದೆ. ತೆಲುಗು, ತಮಿಳಿನ ಯಶಸ್ವಿ ಚಿತ್ರ 'ಕಾಂಚನ' ರೀಮೇಕ್ ಆದ 'ಕಲ್ಪನ' ಚಿತ್ರ 25 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದೆ. ಬೆಂಗಳೂರಿನ ಸ್ವಪ್ನ ಚಿತ್ರಮಂದಿರದಲ್ಲಿ ಈಗಲೂ 'ಕಲ್ಪನ' ಚಿತ್ರ ಯಶಸ್ಚಿ ಪ್ರದರ್ಶನ ಕಾಣುತ್ತಿದ್ದು ಉಪ್ಪಿ ಅಭಿನಯ ಎಲ್ಲರನ್ನೂ ಸೆಳೆಯುತ್ತಿದೆ.
ಉಪೇಂದ್ರ ಅಭಿನಯದ 'ಗಾಡ್ ಫಾದರ್' ಚಿತ್ರ ಅದ್ಯಾಕೋ ಏನೋ ಅರ್ಧ ಶತಕ ಬಾರಿಸುವಲ್ಲಿ ತಿಣುಕಾಡಬೇಕಾಯಿತು. ಆದರೆ 'ಕಠಾರಿವೀರ ಸುರಸುಂದರಾಂಗಿ' ಚಿತ್ರ 75 ದಿನ ಪ್ರದರ್ಶನ ಕಂಡಿದೆ. 'ಕಲ್ಪನ' ಚಿತ್ರದ ನಿರ್ಮಾಪಕ ಫುಲ್ ಸೇಫ್ ಆಗಿರುವುದಷ್ಟೇ ಅಲ್ಲ ಲಾಭದ ಫಸಲನ್ನೂ ಕಂಡಿದ್ದಾರೆ.
ಚಿತ್ರದ ಸ್ಯಾಟಲೈಟ್ ಹಕ್ಕುಗಳಿಂದಲೇ ರು.1.75 ಕೋಟಿ ವಸೂಲಿಯಾಗಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ ರು.6 ಕೋಟಿ ಎನ್ನುತ್ತವೆ ಮೂಲಗಳು. ಚಿತ್ರಕ್ಕೆ ಹೂಡಿರುವ ಬಂಡವಾಳ ರು.4 ಕೋಟಿಗೆ ಹೋಲಿಸಿದರೆ 'ಕಲ್ಪನ' ಚಿತ್ರ ನಿರ್ಮಾಪಕರಿಗೆ ಪಾಲಿಗೆ ಲಾಟರಿ ಹೊಡೆದಂತಾಗಿದೆ.
ಮೈಸೂರು, ಉತ್ತರ ಕರ್ನಾಟಕ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೂಪರ್ ಹಿಟ್ ಆಗಿದ್ದು ರಾಜ್ಯದ ಉಳಿದೆಡೆ ಹಿಟ್ ಚಿತ್ರವಾಗಿ ಡಿಕ್ಲೇರ್ ಆಗಿದೆ. ಈ ಚಿತ್ರದ ಪಾತ್ರವರ್ಗದಲ್ಲಿ ಲಕ್ಷ್ಮಿ ರೈ, ಸಾಯಿಕುಮಾರ್, ಶ್ರುತಿ ಹಾಗೂ ಉಮಾಶ್ರೀ ಅಭಿನಯಿಸಿದ್ದಾರೆ. ಸುದೀರ್ಘ ಸಮಯದ ಬಳಿಕ ಈ ಚಿತ್ರದ ಮೂಲಕ ಸಾಯಿಕುಮಾರ್ ಮತ್ತೊಮ್ಮೆ ಕನ್ನಡಕ್ಕೆ ಅಡಿಯಿಟ್ಟದ್ದು ವಿಶೇಷ. (ಏಜೆನ್ಸೀಸ್)