twitter
    For Quick Alerts
    ALLOW NOTIFICATIONS  
    For Daily Alerts

    ಮೈಸೂರಿನಲ್ಲಿ ಚುನಾವಣಾ ಕಣಕ್ಕಿಳಿದ ಉಪೇಂದ್ರ ಪಕ್ಷದ ಅಭ್ಯರ್ಥಿ

    By ಯಶಸ್ವಿನಿ ಎಂ.ಕೆ
    |

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು - ಕೊಡಗು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ವಿ. ಆಶಾರಾಣಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

    ಚಲನಚಿತ್ರ ನಟ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಸ್ಥಾಪಿಸಿರುವ ಉತ್ತಮ ಪ್ರಜಾಕೀಯ ಪಕ್ಷದಿಂದ ಮೈಸೂರು - ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಆಶಾರಾಣಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಅಭಿರಾಮ ಅವರಿಗೆ ಆಶಾರಾಣಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

    Upendra party candidate filed nomination in Mysore

    ಲೋಕಸಭಾ ಮಹಾ ಸಮರಕ್ಕೆ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಸಜ್ಜಾಗುತ್ತಿದೆ. ಈ ನಡುವೆ ಪಕ್ಷೇತರರಾಗಿ ಕೂಡ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 26ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಕಾರಣ ಸದ್ಯ 11ಮಂದಿ ಸ್ಪರ್ಧಾಕಾಂಕ್ಷಿಗಳು ಮೈಸೂರು-ಕೊಡುಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

    'ಉಪ್ಪಿ 30' ಸಂದರ್ಶನ : ಮಲಗಿದ್ದರೆ ಸಾವು.. ಕುಳಿತ್ತಿದ್ದರೆ ರೋಗ.. ನಡೆಯುತ್ತಿದ್ದರೆ ಜೀವನ.. 'ಉಪ್ಪಿ 30' ಸಂದರ್ಶನ : ಮಲಗಿದ್ದರೆ ಸಾವು.. ಕುಳಿತ್ತಿದ್ದರೆ ರೋಗ.. ನಡೆಯುತ್ತಿದ್ದರೆ ಜೀವನ..

    ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಉಪೇಂದ್ರ ಅವರನ್ನ ಹೊರತುಪಡಿಸಿ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.

    ಉಳಿದಂತೆ ಸ್ವತಂತ್ರ ಅಭ್ಯರ್ಥಿಗಳಾದ ಶ್ರೀನಿವಾಸಯ್ಯ, ಕಾವೇರಿಯಮ್ಮ ಹಾಗೂ ಬಿ.ಡಿ ನಿಂಗಪ್ಪ ಎಂಬುವರು ತಮ್ಮ ಬೆಂಬಲಿಗರೊಂದಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆದ ಅಭಿರಾಂ ಅವರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್‌ ಸಿಂಹ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

    English summary
    In the forthcoming Lok Sabha elections, Uttama prajakeeya party candidate Asharani contest Mysuru-Kodagu constituency. Yesterday four people submitted their candidature including Asharani.
    Saturday, March 23, 2019, 13:55
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X