Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉಪೇಂದ್ರ ಹೊಸ ಪಕ್ಷದ ಹೆಸರು 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ' (KPJP)!

ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಳ್ಳಗೆ 11.30ಕ್ಕೆ ನಗರದ ಗಾಂಧಿಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಪ್ಪಿ ತಮ್ಮ ಪಕ್ಷದ ಹೆಸರನ್ನು ಬಹಿರಂಗ ಪಡಿಸಿದ್ದು, ಪಕ್ಷಕ್ಕೆ 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ' (KPJP) ಎಂಬ ಹೆಸರನ್ನು ಇಟ್ಟಿದ್ದಾರೆ.
ಉಪ್ಪಿ ಅವರ ಪಕ್ಷವನ್ನು ಮೊದಲು 'ಪ್ರಜಾಕೀಯ' ಬಳಿಕ 'ಉತ್ತಮ ಪ್ರಜಾ ಪಾರ್ಟಿ' ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಆದರೆ ಇಂದು ಪಕ್ಷಕ್ಕೆ ಅಧಿಕೃತವಾಗಿ 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ'(KPJP) ಎಂಬ ಹೆಸರನ್ನು ಇಡಲಾಗಿದೆ.
ಇನ್ನು, ಇಂದು ನಡೆದ ಕಾರ್ಯಕ್ರಮದ ಮೊದಲು ಕನ್ನಡ ತಾಯಿಯನ್ನು ಉಪ್ಪಿ ನೆನೆದರು. ಬಳಿಕ ಗಣೇಶನ ಹಾಡನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ''ಇದು ರಾಜಕೀಯ ಪಕ್ಷದ ಘೋಷಣೆ ಅಲ್ಲ, ಪ್ರಜಾಕೀಯ..'' ಎಂದು ಉಪ್ಪಿ ಹೇಳಿದರು.
ಕಾರ್ಯಕ್ರಮದಲ್ಲಿ ಉಪೇಂದ್ರ ತಂದೆ, ತಾಯಿ, ಅಣ್ಣ ಸುಧೀಂದ್ರ, ಉಪೇಂದ್ರರ ಪತ್ನಿ ಪ್ರಿಯಾಂಕ ಉಪೇಂದ್ರ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು. ಜೊತೆಗೆ ಉಪೇಂದ್ರ ಅವರ ಚಿತ್ರರಂಗದ ಒಡನಾಡಿಗಳು ಕೂಡ ಉಪ್ಪಿಗೆ ಸಾಥ್ ನೀಡಿದರು. ಎಲ್ಲಿರೂ ಖಾಕಿ ಬಟ್ಟೆ ತೊಟ್ಟು ಗಮನ ಸೆಳೆದರು.