Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ ಹೊಸ ಪಕ್ಷದ ಹೆಸರು 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ' (KPJP)!
Recommended Video
ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಳ್ಳಗೆ 11.30ಕ್ಕೆ ನಗರದ ಗಾಂಧಿಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಪ್ಪಿ ತಮ್ಮ ಪಕ್ಷದ ಹೆಸರನ್ನು ಬಹಿರಂಗ ಪಡಿಸಿದ್ದು, ಪಕ್ಷಕ್ಕೆ 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ' (KPJP) ಎಂಬ ಹೆಸರನ್ನು ಇಟ್ಟಿದ್ದಾರೆ.
ಉಪ್ಪಿ ಅವರ ಪಕ್ಷವನ್ನು ಮೊದಲು 'ಪ್ರಜಾಕೀಯ' ಬಳಿಕ 'ಉತ್ತಮ ಪ್ರಜಾ ಪಾರ್ಟಿ' ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಆದರೆ ಇಂದು ಪಕ್ಷಕ್ಕೆ ಅಧಿಕೃತವಾಗಿ 'ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ'(KPJP) ಎಂಬ ಹೆಸರನ್ನು ಇಡಲಾಗಿದೆ.
ಇನ್ನು, ಇಂದು ನಡೆದ ಕಾರ್ಯಕ್ರಮದ ಮೊದಲು ಕನ್ನಡ ತಾಯಿಯನ್ನು ಉಪ್ಪಿ ನೆನೆದರು. ಬಳಿಕ ಗಣೇಶನ ಹಾಡನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ''ಇದು ರಾಜಕೀಯ ಪಕ್ಷದ ಘೋಷಣೆ ಅಲ್ಲ, ಪ್ರಜಾಕೀಯ..'' ಎಂದು ಉಪ್ಪಿ ಹೇಳಿದರು.
ಕಾರ್ಯಕ್ರಮದಲ್ಲಿ ಉಪೇಂದ್ರ ತಂದೆ, ತಾಯಿ, ಅಣ್ಣ ಸುಧೀಂದ್ರ, ಉಪೇಂದ್ರರ ಪತ್ನಿ ಪ್ರಿಯಾಂಕ ಉಪೇಂದ್ರ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು. ಜೊತೆಗೆ ಉಪೇಂದ್ರ ಅವರ ಚಿತ್ರರಂಗದ ಒಡನಾಡಿಗಳು ಕೂಡ ಉಪ್ಪಿಗೆ ಸಾಥ್ ನೀಡಿದರು. ಎಲ್ಲಿರೂ ಖಾಕಿ ಬಟ್ಟೆ ತೊಟ್ಟು ಗಮನ ಸೆಳೆದರು.