Don't Miss!
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೆವರೇಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ರಜಾಕೀಯ'ದ ಮೂಲ ಉದ್ದೇಶ ಬಿಚ್ಚಿಟ್ಟ ಉಪೇಂದ್ರ
Recommended Video
ರಿಯಲ್ ಸ್ಟಾರ್ ಉಪೇಂದ್ರ 'ಕೆಪಿಜೆಪಿ' ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿ, ನಂತರ ಪಕ್ಷದಲ್ಲಿ ಉಂಟಾದ ಆಂತರಿಕ ಬೆಳವಣಿಗೆಗಳಿಂದ ಬೇಸತ್ತು ಹೊರಗೆ ಬಂದಿದ್ದರು. 'ಕೆಪಿಜೆಪಿ' ತೊರೆದ ಮೇಲೆ 'ಉತ್ತಮ ಪ್ರಜಾ ಪಾರ್ಟಿ' ಎಂಬ ಹೆಸರಿನಲ್ಲಿ ಪಕ್ಷ ಸಂಘಟನೆ ಮುಂದುವರಿಸಿರುವ ಉಪ್ಪಿ ತಮ್ಮ ಪಕ್ಷದ ಮೂಲ ಉದ್ದೇಶವೇನು ಎಂಬುದನ್ನ ಹಂಚಿಕೊಂಡಿದ್ದಾರೆ.
ಪ್ರಜೆಗಳಿಗೆ ಸಿಗಬೇಕಾದ ಸವಲತ್ತುಗಳು, ಯೋಜನೆಗಳು ನೇರವಾಗಿ ಅವರಿಗೆ ತಲುಪಿತ್ತಿಲ್ಲ ಎಂಬುದು ಗೊತ್ತಿರುವ ವಿಚಾರ. ಇದನ್ನ ನೇರವಾಗಿ ಜನರಿಗೆ ಸಿಗುವಂತೆ ಮಾಡುವುದು ಪ್ರಜಾಕೀಯದ ಉದ್ದೇಶವೆಂದು ತಿಳಿಸಿದ್ದಾರೆ.
''ಉತ್ತಮ ಪ್ರಜಾಕೀಯದ ಪಕ್ಷದ ಮೂಲ ಉದ್ದೇಶ. ಪ್ರಜೆಗಳ ತೆರಿಗೆ ಹಣವನ್ನು (ಬಜೆಟ್) ಭ್ರಷ್ಟ ವ್ಯವಸ್ಥೆಯ ಸರಪಣಿಯಿಂದ ಹೊರಗೆ ತಂದು ನೇರವಾಗಿ ಪ್ರಜೆಗಳಿಗೆ ಸಂಪೂರ್ಣ ಪಾರದರ್ಶಕತೆಯಿಂದ ತಲುಪಿಸುವ ವ್ಯವಸ್ಥೆ'' ಎಂದು ಟ್ವೀಟ್ ಮಾಡಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರಗೆ ಸುದೀಪ್ ಹಾಕಿದರು ಚಾಲೆಂಜ್
ಸದ್ಯ, ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಉಪ್ಪಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೋರಾಟ, ಕನಸು, ಭವಿಷ್ಯದ ದೇಶವನ್ನ ಕಟ್ಟಿಕೊಡುತ್ತಿದ್ದಾರೆ. ಪ್ರಜಾಕೀಯದ ಕೆಲಸ ಹೇಗಿರುತ್ತೆ, ಅದರ ತತ್ವಗಳೇನು.? ಆದರ್ಶವೇನು.? ಉದ್ದೇಶಗಳೇನು ಎಂಬುದನ್ನ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಇನ್ನುಳಿದಂತೆ ಆರ್.ಚಂದ್ರು ನಿರ್ದೇಶನ ಮಾಡುತ್ತಿರುವ 'ಐ ಲವ್ ಯು' ಚಿತ್ರದಲ್ಲಿ ಉಪೇಂದ್ರ ಅಭಿನಯಿಸುತ್ತಿರುವುದು ನಿಮಗೆಲ್ಲ ಗೊತ್ತಿದೆ. ಇದರ ಜೊತೆಗೆ 'ಡಾ ಮೋದಿ' ಸೇರಿದಂತೆ ಎರಡ್ಮೂರು ಚಿತ್ರಗಳಿಗೂ ಉಪೇಂದ್ರ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 'ಐ ಲವ್ ಯು' ಚಿತ್ರ ಮುಗಿದ ಬಳಿಕ 'ಅಧೀರ' ಚಿತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ. 'ಅಧೀರ' ಎಂಬ ಚಿತ್ರಕ್ಕೆ ಯುವ ನಿರ್ದೇಶಕ ಸಂತು ಆಕ್ಷನ್ ಕಟ್ ಹೇಳಲಿದ್ದಾರೆ.