Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ರಜಾಕೀಯ'ದ ಮೂಲ ಉದ್ದೇಶ ಬಿಚ್ಚಿಟ್ಟ ಉಪೇಂದ್ರ
Recommended Video
ರಿಯಲ್ ಸ್ಟಾರ್ ಉಪೇಂದ್ರ 'ಕೆಪಿಜೆಪಿ' ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿ, ನಂತರ ಪಕ್ಷದಲ್ಲಿ ಉಂಟಾದ ಆಂತರಿಕ ಬೆಳವಣಿಗೆಗಳಿಂದ ಬೇಸತ್ತು ಹೊರಗೆ ಬಂದಿದ್ದರು. 'ಕೆಪಿಜೆಪಿ' ತೊರೆದ ಮೇಲೆ 'ಉತ್ತಮ ಪ್ರಜಾ ಪಾರ್ಟಿ' ಎಂಬ ಹೆಸರಿನಲ್ಲಿ ಪಕ್ಷ ಸಂಘಟನೆ ಮುಂದುವರಿಸಿರುವ ಉಪ್ಪಿ ತಮ್ಮ ಪಕ್ಷದ ಮೂಲ ಉದ್ದೇಶವೇನು ಎಂಬುದನ್ನ ಹಂಚಿಕೊಂಡಿದ್ದಾರೆ.
ಪ್ರಜೆಗಳಿಗೆ ಸಿಗಬೇಕಾದ ಸವಲತ್ತುಗಳು, ಯೋಜನೆಗಳು ನೇರವಾಗಿ ಅವರಿಗೆ ತಲುಪಿತ್ತಿಲ್ಲ ಎಂಬುದು ಗೊತ್ತಿರುವ ವಿಚಾರ. ಇದನ್ನ ನೇರವಾಗಿ ಜನರಿಗೆ ಸಿಗುವಂತೆ ಮಾಡುವುದು ಪ್ರಜಾಕೀಯದ ಉದ್ದೇಶವೆಂದು ತಿಳಿಸಿದ್ದಾರೆ.
''ಉತ್ತಮ ಪ್ರಜಾಕೀಯದ ಪಕ್ಷದ ಮೂಲ ಉದ್ದೇಶ. ಪ್ರಜೆಗಳ ತೆರಿಗೆ ಹಣವನ್ನು (ಬಜೆಟ್) ಭ್ರಷ್ಟ ವ್ಯವಸ್ಥೆಯ ಸರಪಣಿಯಿಂದ ಹೊರಗೆ ತಂದು ನೇರವಾಗಿ ಪ್ರಜೆಗಳಿಗೆ ಸಂಪೂರ್ಣ ಪಾರದರ್ಶಕತೆಯಿಂದ ತಲುಪಿಸುವ ವ್ಯವಸ್ಥೆ'' ಎಂದು ಟ್ವೀಟ್ ಮಾಡಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರಗೆ ಸುದೀಪ್ ಹಾಕಿದರು ಚಾಲೆಂಜ್
ಸದ್ಯ, ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಉಪ್ಪಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೋರಾಟ, ಕನಸು, ಭವಿಷ್ಯದ ದೇಶವನ್ನ ಕಟ್ಟಿಕೊಡುತ್ತಿದ್ದಾರೆ. ಪ್ರಜಾಕೀಯದ ಕೆಲಸ ಹೇಗಿರುತ್ತೆ, ಅದರ ತತ್ವಗಳೇನು.? ಆದರ್ಶವೇನು.? ಉದ್ದೇಶಗಳೇನು ಎಂಬುದನ್ನ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಇನ್ನುಳಿದಂತೆ ಆರ್.ಚಂದ್ರು ನಿರ್ದೇಶನ ಮಾಡುತ್ತಿರುವ 'ಐ ಲವ್ ಯು' ಚಿತ್ರದಲ್ಲಿ ಉಪೇಂದ್ರ ಅಭಿನಯಿಸುತ್ತಿರುವುದು ನಿಮಗೆಲ್ಲ ಗೊತ್ತಿದೆ. ಇದರ ಜೊತೆಗೆ 'ಡಾ ಮೋದಿ' ಸೇರಿದಂತೆ ಎರಡ್ಮೂರು ಚಿತ್ರಗಳಿಗೂ ಉಪೇಂದ್ರ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 'ಐ ಲವ್ ಯು' ಚಿತ್ರ ಮುಗಿದ ಬಳಿಕ 'ಅಧೀರ' ಚಿತ್ರದಲ್ಲಿ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ. 'ಅಧೀರ' ಎಂಬ ಚಿತ್ರಕ್ಕೆ ಯುವ ನಿರ್ದೇಶಕ ಸಂತು ಆಕ್ಷನ್ ಕಟ್ ಹೇಳಲಿದ್ದಾರೆ.