twitter
    For Quick Alerts
    ALLOW NOTIFICATIONS  
    For Daily Alerts

    ಮತ್ತಷ್ಟು ಮಹತ್ಕಾರ್ಯಗಳು ನಡೆಯಲಿ; ಯಶ್ ಸಹಾಯಕ್ಕೆ ಉಪೇಂದ್ರ ಪ್ರತಿಕ್ರಿಯೆ

    |

    ಕೊರೊನಾ ಲಾಕ್ ಡೌನ್ ನಿಂದ ಲಕ್ಷಾಂತರ ಮಂದಿ ಪರದಾಡುತ್ತಿದ್ದಾರೆ. ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಚಿತ್ರೀಕರಣ , ಸಿನಿಮಾ ಕೆಲಸವಿಲ್ಲದೆ ಸಾವಿರಾರು ಸಿನಿ ಕಾರ್ಮಿಕರ ಬದುಕು ಕಷ್ಟದಲ್ಲಿದೆ. ಸಂಕಷ್ಟದಲ್ಲಿರುವ ಅನೇಕ ಮಂದಿಗೆ ಈಗಾಗಲೇ ಸಾಕಷ್ಟು ಜನ ಸಹಾಯ ಮಾಡಿದ್ದಾರೆ. ನೆರವಿನ ಹಸ್ತ ಚಾಚುತ್ತಿದ್ದಾರೆ.

    Recommended Video

    Yas ಮಾಡಿದ ಒಳ್ಳೆ ಕೆಲಸಕ್ಕೆ Upendra ಫಿದಾ | Filmibeat Kannada

    ಇದೀಗ ಸಿನಿ ಕಾರ್ಮಿಕರ ನೆರವಿಗೆ ರಾಕಿಂಗ್ ಸ್ಟಾರ್ ಯಶ್ ಧಾವಿಸಿದ್ದಾರೆ. ಸಂಕಷ್ಟದಲ್ಲಿರುವ 3 ಸಾವಿರ ಸಿನಿ ಕಾರ್ಮಿಕರಿಗೆ ಯಶ್ ನೆರವು ನೀಡುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಯಶ್ 'ಸಂಕಷ್ಟದಲ್ಲಿರುವ 3 ಸಾವಿರಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಕುಟುಂಬಗಳಿಗೆ ನಾನು ಸಂಪಾದನೆ ಮಾಡಿರುವ ಸ್ವಂತ ಹಣದಿಂದ ತಲಾ 5 ಸಾವಿರ ರೂಪಾಯಿ ನೀಡುತ್ತಿರುವುದಾಗಿ' ತಿಳಿಸಿದ್ದಾರೆ.

    3 ಸಾವಿರ ಸಿನಿ ಕುಟುಂಬಗಳಿಗೆ ತಲಾ 5 ಸಾವಿರ ನೆರವು ಘೋಷಿಸಿದ ಯಶ್3 ಸಾವಿರ ಸಿನಿ ಕುಟುಂಬಗಳಿಗೆ ತಲಾ 5 ಸಾವಿರ ನೆರವು ಘೋಷಿಸಿದ ಯಶ್

    ಯಶ್ ಅವರ ಕಾರ್ಯಕ್ಕೆ ನಟ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯೆ ನೀಡಿ ಧನ್ಯವಾದ ತಿಳಿಸಿದ್ದಾರೆ. ನಿಮ್ಮಿಂದ ಇಂಥ ಕಾರ್ಯ ಮತ್ತಷ್ಟು ಆಗಲಿ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಉತ್ತಮ ಕಾರ್ಯ. ಧನ್ಯವಾದಗಳು ಯಶ್. ಇಂಥ ಮತ್ತಷ್ಟು ಮಹತ್ಕಾರ್ಯಗಳು ನಿಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ' ಎಂದು ಹೇಳಿದ್ದಾರೆ.

    Upendra Thanks to Yash help for Kannada film Industry workers

    ಯಶ್ ಮಹತ್ವದ ಕಾರ್ಯಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಸಾಕಷ್ಟು ಧನ್ಯವಾದ ತಿಳಿಸುತ್ತಿದ್ದಾರೆ. ಅಂದಹಾಗೆ ಈಗಾಗಲೇ ಅನೇಕ ಕಲಾವಿದರು ಸಂಕಷ್ಟದ ಸಮಯದಲ್ಲಿ ನೆರವಿಗೆ ನಿಂತಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ, ಸುದೀಪ್ ಸೇರಿದಂತೆ ಅನೇಕರು ಕಷ್ಟದಲ್ಲಿರುವವರಿಗೆ ಆಹಾರ ಕಿಟ್, ಅಗತ್ಯ ವಸ್ತುಗಳನ್ನು ನೀಡುವ ಮೂಲಕ ನೆರವು ನೀಡಿದ್ದಾರೆ.

    English summary
    Real star Upendra Thanks to Yash help for Kannada film Industry workers.
    Wednesday, June 2, 2021, 9:34
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X