Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ಪಾಸಾದ ಉಪೇಂದ್ರ ಟೋಪಿವಾಲ
ಉಪೇಂದ್ರ ಚಿತ್ರ ಎಂದರೆ ಸಾಮಾನ್ಯವಾಗಿ ಸಂಭಾಷಣೆ, ಕಥೆ, ಹಾಡುಗಳ ಮೇಲೆ ಬಹಳಷ್ಟು ನಿರೀಕ್ಷೆಗಳಿರುತ್ತವೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಟೋಪಿವಾಲ ಚಿತ್ರವೂ ಒಂದು. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಚಿತ್ರವಿರುತ್ತದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.
ಮಾರ್ಚ್ 8ರಂದೇ ಚಿತ್ರ ತೆರೆಕಾಣಬೇಕಾಗಿತ್ತು. ಆದರೆ ಚಿತ್ರಕ್ಕೆ ಸೆನ್ಸಾರ್ ಆಗಲು ಕೊಂಚ ತಡವಾಯಿತು. ಪ್ರಸ್ತುತ ರಾಜಕೀಯ ಸನ್ನಿವೇಶಗಳು ಚಿತ್ರದಲ್ಲಿದ್ದು, ಚಿತ್ರದ ಕಥೆಗೆ ಭಂಗ ಬಾರದಂತೆ ಕತ್ತರಿ ಹಾಕಲಾಗಿದೆ ಎನ್ನಲಾಗಿದೆ.
ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಸೆನ್ಸಾರ್ ಚಿತ್ರತಂಡಕ್ಕೆ ಸೂಚಿಸಿದೆ. ಚಿತ್ರದ ಕಥೆಯ ಓಟಕ್ಕೆ ಯಾವುದೇ ತೊಂದರೆಯಾಗದಂತೆ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದ್ದು, ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ.
'ಟೋಪಿವಾಲ' ಕಥೆ, ಚಿತ್ರಕಥೆ ಉಪೇಂದ್ರ ಅವರೇ ಹೆಣೆದಿದ್ದರೂ ಆಕ್ಷನ್ ಕಟ್ ಹೇಳಿರುವುದು ಶ್ರೀನಿವಾಸ್ (ಶ್ರೀನಿ). ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ಪಿ.ಶ್ರೀಕಾಂತ್ ಹಾಗೂ ಕನಕಪುರ ಶ್ರೀನಿವಾಸ್ ನಿರ್ಮಿಸಿರುವ ಚಿತ್ರ ಇದಾಗಿದೆ. ಭಾವನಾ ನಾಯಕಿಯಾಗಿರುವ ಚಿತ್ರದ ಅಡಿಬರಹವು ಕ್ಯಾಚಿಯಾಗಿದ್ದು, 'ತಲೆ ಇಲ್ಲದವರಿಗಲ್ಲ' ಎಂದಿಡಲಾಗಿದೆ. (ಏಜೆನ್ಸೀಸ್)