Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೆಹಲಿ ಚುನಾವಣೆ ಫಲಿತಾಂಶದ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
Recommended Video
ಇಂದು ದೆಹಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದ ಬಗ್ಗೆ ರಾಜಕೀಯ ಗಣ್ಯರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ನಟ ಹಾಗೂ ಯುಪಿಪಿ (ಉತ್ತರ ಪ್ರಜಾಕೀಯ ಪಕ್ಷ) ಸಂಸ್ಥಾಪಕ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
''ಇಂದಿನ ದೆಹಲಿ ಚುನಾವಣಾ ಫಲಿತಾಂಶ ಇಡೀ ದೇಶದ ರಾಜಕೀಯ ಲೆಕ್ಕಾಚಾರ ತಲೆಕೆಳಗೆ ಮಾಡಿದೆ. ಜನರಿಗೆ ಉತ್ತಮ ಸರ್ಕಾರಿ ಶಾಲೆ, ಕಾಲೇಜು, ಆಸ್ಪತ್ರೆ, ವಿಧ್ಯುತ್, ರಸ್ತೆ ,ನೀರು, ಸುರಕ್ಷತೆ ಇಂತಹ ಅಗತ್ಯ ಸೌಲಭ್ಯ ಕೊಡುವ ಪ್ರಾದೇಶಿಕ ಪಕ್ಷಗಳು ಬೇಕು, ಏನಂತೀರಾ ?'' ಎಂದು ಉಪೇಂದ್ರ ಬರೆದಿದ್ದಾರೆ.
ದೆಹಲಿ ಫಲಿತಾಂಶ; 'ಚಾಣಕ್ಯ' ಬಲದ ಬಗ್ಗೆ ಎಚ್ಡಿಕೆ ಟ್ವೀಟ್
ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಕಟ್ಟಿರುವ ಉಪೇಂದ್ರ, ಮತ್ತೊಂದು ಪ್ರಾದೇಶಿಕ ಪಕ್ಷದ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಜನರಿಗೆ ಉತ್ತಮ ಸೌಲಭ್ಯ ನೀಡುವ ಪ್ರಾದೇಶಿಕ ಪಕ್ಷಗಳು ಬೇಕು ಎಂದು ಉಪೇಂದ್ರ ಹೇಳಿದ್ದಾರೆ.
#upp #prajaakeeya #ArvindKejriwal #AAPWinningDelhi
— Upendra (@nimmaupendra) February 11, 2020
ಇಂದಿನ ದೆಹಲಿ ಚುನಾವಣಾ ಫಲಿತಾಂಶ ಇಡೀ ದೇಶದ ರಾಜಕೀಯ ಲೆಕ್ಕಾಚಾರ ತಲೆಕೆಳಗೆ ಮಾಡಿದೆ. ಜನರಿಗೆ ಉತ್ತಮ ಸರ್ಕಾರೀ ಶಾಲೆ, ಕಾಲೇಜು,ಆಸ್ಪತ್ರೆ, ವಿಧ್ಯುತ್, ರಸ್ತೆ ,ನೀರು, ಸುರಕ್ಷತೆ ಇಂತಹ ಅಗತ್ಯ ಸೌಲಭ್ಯ ಕೊಡುವ ಪ್ರಾದೇಶಿಕ ಪಕ್ಷಗಳು ಬೇಕು, ಏನಂತೀರಾ ?
ಅಂದಹಾಗೆ, ದೆಹಲಿಯ 70 ದೆಹಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ 60ಕ್ಕೂ ಅಧಿಕ ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ರಾಜಧಾನಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಪ್ರಾದೇಶಿಕ ಪಕ್ಷ ಗದ್ದುಗೆ ಏರಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರ ಹಿಡಿಯುವಲಿ ವಿಫಲವಾಗಿದೆ.