Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚುನಾವಣಾ ಫಲಿತಾಂಶದ ಬಗ್ಗೆ ಉಪೇಂದ್ರ ಟ್ವೀಟ್
2019 ಲೋಕಸಭಾ ಚುನಾವಣಾ ಮಹಾಸಮರದ ಫಲಿತಾಂಶ ಬಂದಿದೆ. ಚುನಾವಣಾ ಫಲಿತಾಂಶದ ಬಗ್ಗೆ ನಟ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
ಅಂಬಿ ಹುಟ್ಟುಹಬ್ಬಕ್ಕೆ ಸುಮಲತಾ ನೀಡಿದ ಒಲವಿನ ಉಡುಗೊರೆ
ಯು ಪಿ ಪಿ ಪಕ್ಷದ ಅಧ್ಯಕ್ಷರಾಗಿರುವ ಉಪೇಂದ್ರ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರು. ಇದು ಅವರ ಪಕ್ಷದ ಮೊದಲ ಚುನಾವಣೆಯಾಗಿತ್ತು. ಆದರೆ, ಯಾವ ಕ್ಷೇತ್ರದಿಂದ ಕೂಡ ಅವರ ಯಾವ ಅಭ್ಯರ್ಥಿಗಳು ವಿಜೇತರಾಗಲು ಸಾಧ್ಯ ಆಗಿಲ್ಲ.
ಇನ್ನು ಚುನಾವಣೆ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ ''ತಾವೇ ನಾಯಕರಾಗಲು ಬಯಸಿ ಉತ್ತಮ ಪ್ರಜಾಕೀಯ ಪಕ್ಷದ ಕಾರ್ಮಿಕರಿಗೆ ಮತ ಚಲಾಯಿಸಿದ, ಬೆಂಬಲಿಸಿದ, ಭಾಗವಹಿಸಿದ ಪ್ರತಿಯೊಬ್ಬರಿಗೂ ವಂದನೆಗಳು. ಸಂಪೂರ್ಣ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನೀಡಿದ ಒಂದೊಂದು ಮತವೂ ಬಹಳ ಅಮೂಲ್ಯವಾದದ್ದು. ಪ್ರಜಾಕೀಯದ ವಿಚಾರಗಳು, ಪ್ರಯತ್ನ ಹೀಗೇ ಸಾಗುತ್ತಿರಲಿ. ಸಂಪೂರ್ಣ ಪ್ರಜಾಪ್ರಭುತ್ವ ನಮ್ಮೆಲ್ಲರ ಹಕ್ಕು.'' ಎಂದು ಬರೆದುಕೊಂಡಿದ್ದಾರೆ.
ತಾವೇ ನಾಯಕರಾಗಲು ಬಯಸಿ ಉತ್ತಮ ಪ್ರಜಾಕೀಯ ಪಕ್ಷದ ಕಾರ್ಮಿಕರಿಗೆ ಮತ ಚಲಾಯಿಸಿದ, ಬೆಂಬಲಿಸಿದ, ಭಾಗವಹಿಸಿದ ಪ್ರತಿಯೊಬ್ಬರಿಗೂ ವಂದನೆಗಳು 🙏🙏🙏
— Upendra (@nimmaupendra) May 23, 2019
ಸಂಪೂರ್ಣ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನೀಡಿದ ಒಂದೊಂದು ಮತವೂ ಬಹಳ ಅಮೂಲ್ಯವಾದದ್ದು. ಪ್ರಜಾಕೀಯದ ವಿಚಾರಗಳು,ಪ್ರಯತ್ನ ಹೀಗೇ ಸಾಗುತ್ತಿರಲಿ.
ಸಂಪೂರ್ಣ ಪ್ರಜಾಪ್ರಭುತ್ವ ನಮ್ಮೆಲ್ಲರ ಹಕ್ಕು #upp
ಯಾವುದೇ ಕ್ಷೇತ್ರದಿಂದ ಗೆಲ್ಲದಿದ್ದರೂ ಸಹ ತಮಗೆ ನೀಡಿದ ಪ್ರತಿ ಮತವೂ ಕೂಡ ಅಮೂಲ್ಯವಾದದ್ದು, ಎಂದು ತಮ್ಮ ಪಕ್ಷಕ್ಕೆ ಮತ ಹಾಕಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿಯೂಬ್ಬ ಪ್ರಜಾಪ್ರತಿನಿಧಿಗಳಿಗೆ ಹಾಗೂ ಸ್ಪಷ್ಟ ಆದೇಶ ನೀಡಿದ ಪ್ರಜಾಪ್ರಭುಗಳಿಗೆ ಶುಭಾಷಯಗಳು 🙏🙏🙏
— Upendra (@nimmaupendra) May 23, 2019
ತಮ್ಮ ಮತ್ತೊಂದು ಟ್ವೀಟ್ ಮೂಲಕ ''ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಪ್ರತಿಯೂಬ್ಬ ಪ್ರಜಾ ಪ್ರತಿನಿಧಿಗಳಿಗೆ ಹಾಗೂ ಸ್ಪಷ್ಟ ಆದೇಶ ನೀಡಿದ ಪ್ರಜಾಪ್ರಭುಗಳಿಗೆ ಶುಭಾಷಯಗಳು'' ಎಂದು ವಿಶ್ ಮಾಡಿದ್ದಾರೆ.
ಅಂದಹಾಗೆ, ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ 349 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಿದೆ.