Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆದದ್ದೆಲ್ಲ ಒಳಿತೇ ಆಯಿತು' ಎಂದ ಉಪ್ಪಿ ಮಾತಿನ ಅರ್ಥ ಏನು?
ಕರ್ನಾಟಕ ಚುನಾವಣೆ ಈಗ ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಿಂತ ಹೆಚ್ಚು ಕುತೂಹಲ ಮೂಡಿಸಿದೆ. ಕ್ಷಣ ಕ್ಷಣ ರೋಚಕತೆಯಿಂದ ಕೂಡಿರುವ ಈ ಸಂದರ್ಭದಲ್ಲಿ ಏನಾಗುತ್ತದೆ, ಕರುನಾಡಿನಲ್ಲಿ ಯಾವ ಸರ್ಕಾರ ಬರುತ್ತದೆ ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಇದೇ ವೇಳೆ ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ ಉಪೇಂದ್ರ ಒಂದು ಟ್ವೀಟ್ ಮಾಡಿದ್ದಾರೆ.
'ಆದದ್ದೆಲ್ಲ ಒಳಿತೇ ಆಯಿತು' ಎಂದು ಉಪೇಂದ್ರ ನಿನ್ನೆ (ಮೇ 15) ರಂದು ಸಂಜೆ 8 ಗಂಟೆ ಸುಮಾರಿಗೆ ಒಂದು ಟ್ವೀಟ್ ಮಾಡಿದ್ದಾರೆ. ಇದೀಗ ಈ ಟ್ವೀಟ್ ಹಿಂದಿನ ಅರ್ಥ ಏನು ಎಂಬ ಕೂತುಹಲ ಹೆಚ್ಚಾಗಿದೆ. ಒಂದು ಕಡೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವಾಗದೆ ಇರುವುದನ್ನು ಕುರಿತು ಉಪೇಂದ್ರ 'ಆದದ್ದೆಲ್ಲ ಒಳಿತೇ ಆಯಿತು' ಎಂದು ಹೇಳಿದರಾ? ಅಥವಾ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮಿಶ್ರ ಸರ್ಕಾರ ಮಾಡುವುದಕ್ಕೆ 'ಆದದ್ದೆಲ್ಲ ಒಳಿತೇ ಆಯಿತು' ಎಂದು ಉಪ್ಪಿ ಹೇಳಿದರಾ ? ಎಂಬ ಗೊಂದಲ ಸೃಷ್ಟಿಯಾಗಿದೆ.
ಸರಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡಿದ ರಾಜ್ಯಪಾಲರು!
ಆದದ್ದೆಲ್ಲ ಒಳಿತೇ ಆಯಿತು 😊😊😊
— Upendra (@nimmaupendra) May 15, 2018
ನಿನ್ನೆ ಮತ ಎಣಿಕೆ ಶುರು ಆದ ಪ್ರಾರಂಭದಲ್ಲಿ ಬಿಜಿಪಿ ಬಹುಮತ ಪಡೆಯುತ್ತದೆ ಎನ್ನುವ ಆಸೆ ಹುಟ್ಟಿಸಿತ್ತು. ಆದರೆ ಬಿಜಿಪಿ 104 ಸ್ಥಾನಕ್ಕೆ ಬಂದು ನಿಂತ ಬೆನ್ನಲೆ ಕಾಂಗ್ರೆಸ್ ತಮ್ಮ ಸಂಪೂರ್ಣ ಸಮ್ಮತಿಯನ್ನು ಜೆಡಿಎಸ್ ಪಕ್ಷಕ್ಕೆ ನೀಡಿತು. ಇನ್ನು ಇಂತಹ ಅತಂತ್ರ ಸರ್ಕಾರದ ಪರಿಸ್ಥಿತಿಯಲ್ಲಿ ಈಗ ಉಪೇಂದ್ರ ಮಾಡಿರುವ ಟ್ವೀಟ್ ಎಲ್ಲರೂ ತಲೆ ಕೆಡಸಿಕೊಳ್ಳುವಂತೆ ಮಾಡಿದೆ.
ಅಂದಹಾಗೆ, ಉಪೇಂದ್ರ ಈ ಟ್ವೀಟ್ ಮಾಡುವ ಮೊದಲು ಬಿಜೆಪಿ ಪಕ್ಷಕ್ಕೆ ಶುಭ ಕೋರಿದ್ದರು. ಆದರೆ ಸಂಜೆ ಹೊತ್ತಿಗೆ ಬದಲಾದ ರಾಜಕೀಯಕ್ಕೆ ಚಿತ್ರಣವನ್ನು ಗಮನಿಸಿ ಅವರು 'ಆದದ್ದೆಲ್ಲ ಒಳಿತೇ ಆಯಿತು' ಎಂದು ಟ್ವೀಟ್ ಮಾಡಿದ್ದರು.