Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 'ಉಪ್ಪಿನ ಕಾಗದ' ಪ್ರದರ್ಶನ
ಬಿ.ಸುರೇಶ್ ನಿರ್ದೇಶನದ 'ಉಪ್ಪಿನ ಕಾಗದ' ಸಿನಿಮಾ 'ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಪ್ರದರ್ಶನವಾಗಲಿದೆ. ಈ ವಿಷಯವನ್ನು ಸ್ವತಃ ಬಿ.ಸುರೇಶ್ ಅವರು ತಮ್ಮ ಫೇಸ್ ಬುಕ್ ಪುಟದ ಮೂಲಕ ಹಂಚಿಕೊಂಡಿದ್ದಾರೆ.
''ಇದೇ ಶನಿವಾರ (ಮೇ 27) 'ಉಪ್ಪಿನ ಕಾಗದ' ಸಿನಿಮಾ ದೆಹಲಿಯ ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು, ಮಧ್ಯಾಹ್ನ 2 ಗಂಟೆಗೆ ಪ್ರದರ್ಶನ ಶುರುವಾಗಲಿದೆ. ಇನ್ನು ಪ್ರದರ್ಶನದ ವಿವರಗಳು ಹ್ಯಾಬಿಟಾಟ್ ನಲ್ಲಿಯೇ ಸಿಗಲಿದೆ'' ಎಂದು ದೆಹಲಿಯಲ್ಲಿರುವ ಕನ್ನಡಾಭಿಮಾನಿಗಳನ್ನು ಬಿ.ಸುರೇಶ್ ಆಹ್ವಾನಿಸಿದ್ದಾರೆ.
9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಈಗಾಗಲೇ ಅನೇಕ ಚಲನಚಿತ್ರೋತ್ಸವಗಳಲ್ಲಿ 'ಉಪ್ಪಿನ ಕಾಗದ' ಸಿನಿಮಾ ಪ್ರದರ್ಶನಗೊಂಡಿದೆ. ಈಗ 'ಹ್ಯಾಬಿಟಾಟ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿರುವುದು ದೆಹಲಿಯ ಕನ್ನಡಿಗರಿಗೆ ಸಿನಿಮಾ ನೋಡುವ ಸುವರ್ಣಾವಕಾಶ ಸಿಕ್ಕಿದೆ.
ಅಂದ್ಹಾಗೆ, ಬಿ.ಸುರೇಶ್ ನಿರ್ದೇಶನದ 'ಉಪ್ಪಿನ ಕಾಗದ' ಚಿತ್ರದಲ್ಲಿ ಟಿ.ಎಸ್.ನಾಗಾಭರಣ, ಮಂಡ್ಯ ರಮೇಶ್, ಮುರಳಿ ಶಂಗೇರಿ, ಅಪೂರ್ವ ಭಾರದ್ವಾಜ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದು, ಹರಿಕೃಷ್ಣ ಸಂಗೀತ ಸಂಯೋಜನೆ ಇದೆ.