Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ರಿಯಲ್ ಸ್ಟಾರ್ ಉಪೇಂದ್ರ
ಚುನಾವಣ ಆಯೋಗ ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆ ಮಾಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅನರ್ಹ ಶಾಸಕರಿಂದ ಖಾಲಿಯಾಗಿರುವ 17 ಕ್ಷೇತ್ರಗಳ ಪೈಕಿ ಆರ್.ಆರ್ ನಗರ ಹಾಗೂ ಮಸ್ಕಿ ಕ್ಷೇತ್ರ ಬಿಟ್ಟು ಉಳಿದ 15 ಕ್ಷೇತ್ರದಲ್ಲಿ ಅಕ್ಟೋಬರ್ 21 ರಂದು ಬೈ ಎಲೆಕ್ಷನ್ ನಡೆಯಲಿದೆ.
ಈ ಉಪಚುನಾವಣೆಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ವತಃ ಉಪೇಂದ್ರ ಘೋಷಿಸಿದ್ದಾರೆ.
Big Breaking: ಅನರ್ಹ ಶಾಸಕರು ಉಪ ಚುನಾವಣೆ ಸರ್ಧಿಸಲು ಅವಕಾಶವಿಲ್ಲ
''ಇದೇ ಅಕ್ಟೋಬರ್ 21 ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ... ಪ್ರಜಾಕೀಯದ ವಿಚಾರಗಳಿಗೆ ತಮ್ಮ ಅಮೂಲ್ಯವಾದ ಮತ ಮೀಸಲಾಗಿರಿಸಿ..'' ಎಂದು ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದಾರೆ.
ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?
ಯುಪಿಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿರುವ ಉಪೇಂದ್ರ, ತಾವು ಸ್ಪರ್ಧೆ ಮಾಡುವುದರ ಬಗ್ಗೆ ಯಾವುದೇ ತೀರ್ಮಾನ ತಿಳಿಸಿಲ್ಲ. ಬೈ ಎಲೆಕ್ಷನ್ ನಡೆಯುವ ಯಾವೂದಾರೂ ಒಂದು ಕ್ಷೇತ್ರದಲ್ಲಿ ಉಪೇಂದ್ರ ಸ್ಪರ್ಧೆ ಮಾಡಬಹುದು ಎಂಬ ಚರ್ಚೆ ಮಾತ್ರ ಅಭಿಮಾನಿಗಳಲ್ಲಿ ಉಳಿದುಕೊಂಡಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಎಲ್ಲ ಕ್ಷೇತ್ರದಲ್ಲೂ ಸ್ಪರ್ಧಿಸಿದ್ದರು. ಆದರೆ, ಒಂದೇ ಒಂದು ಸೀಟು ಕೂಡ ಗೆಲ್ಲಲಿಲ್ಲ. ಇದೀಗ, ಉಪಚುನಾವಣೆಯಲ್ಲಿ ಮತ್ತೆ ಭರವಸೆ ಇಟ್ಟು ಸ್ಪರ್ಧಿಗಳನ್ನ ಕಣಕ್ಕೆ ಇಳಿಸಲು ತೀರ್ಮಾನಿಸಿದ್ದಾರೆ ಪ್ರಜಾಕೀಯ ನಾಯಕ.