Don't Miss!
- Automobiles ಥಾರ್ 5 ಡೋರ್ ಬಿಡುಗಡೆಗೂ ಮುನ್ನವೇ ಎದುರಾಳಿ ರೆಡಿ: ಹೊಸ ಗೂರ್ಖಾಗೆ ನಲುಗುತ್ತಾ ಮಹೀಂದ್ರಾ!
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- News ಬಿಜೆಪಿ ಯುವಕರಿಗೆ ಪಕೋಡಾ ಮಾರಿ ಎಂದು ಹೇಳಿ ಅವಮಾನ ಮಾಡಿದೆ- ಡಿ ಕೆ ಶಿವಕುಮಾರ್ ಕಿಡಿ
- Finance ಐತಿಹಾಸಿಕ ಹರಾಜು: ಭಾರತ ಮೂಲದ ನೆಲ್ಲೂರು ಹಸು ಬ್ರೆಜಿಲ್ ನಲ್ಲಿ 40 ಕೋಟಿ ರೂ.ಗೆ ಮಾರಾಟ!
- Technology ಅಗ್ಗದ ಬೆಲೆಯಲ್ಲಿ 5G ಫೋನ್ ಬೇಕೆ?..ಹಾಗಿದ್ರೆ ಈ ಆಫರ್ ನಿಮಗೆ ಸೂಪರ್!
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ ನಾಗೇಂದ್ರ ಪ್ರಸಾದ್ಗೆ ಡಾಕ್ಟರೇಟ್ ನೀಡಿದ ಹಂಪಿ ವಿಶ್ವವಿದ್ಯಾಲಯ
ಕನ್ನಡ ಚಿತ್ರರಂಗದ ಕವಿರತ್ನ, ಅದ್ಭುತ ಗೀತಾ ರಚನೆಕಾರ, ಸಂಗೀತ ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
'ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ' ಎಂಬ ವಿಷಯ ಕುರಿತು ಸಂಶೋಧನೆ ಅಧ್ಯಯನ ನಡೆಸಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು.
'ವಿಷ್ಣು ಸಹೋದರ ರವಿ ಹೇಳಿದ 'ಆ ಮಾತು' ನನ್ನ ಕಿವಿಯಲ್ಲಿ ರಿಂಗಣಿಸುತ್ತಿದೆ'
ನಾಗೇಂದ್ರ ಪ್ರಸಾದ್ ಅವರ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ತನ್ನ 29ನೇ ಘಟಿಕೋತ್ಸವ (ನುಡಿಹಬ್ಬ)ದಲ್ಲಿ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿ ನೀಡಿದೆ. ಇಂದು ಬಳ್ಳಾರಿಯಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ 29ನೇ ಘಟಿಕೋತ್ಸವ ಕಾರ್ಯಕ್ರಮ ನಡೆದಿದೆ.
ಸಹಜವಾಗಿ ಚಿತ್ರರಂಗದಲ್ಲಿ ತಾವು ಮಾಡಿದ ಸಾಧನೆ ಅಥವಾ ತಮ್ಮ ಕೊಡುಗೆ ಗುರುತಿಸಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿರುವ ಉದಾಹರಣೆಗಳಿವೆ. ಆದರೆ, ನಾಗೇಂದ್ರ ಪ್ರಸಾದ್ ಅವರು ವಿದ್ಯಾರ್ಥಿಯಂತೆ ಸಂಶೋಧನೆ ನಡೆಸಿ ಮಹಾಪ್ರಬಂಧ ರಚಿಸಿ ಅದಕ್ಕೆ ಪದವಿ ಪಡೆದಿರುವುದು ನಿಜಕ್ಕೂ ಶ್ಲಾಘನೀಯ.
Recommended Video
'ಕವಿರತ್ನ' ಎಂದು ಗುರುತಿಸಿಕೊಂಡಿರುವ ವಿ ನಾಗೇಂದ್ರ ಪ್ರಸಾದ್ ಅವರು ಗೀತೆ ರಚನೆ, ಸಂಭಾಷಣೆ ಬರಹಗಾರರಾಗಿ, ಚಲನಚಿತ್ರ ನಿರ್ದೇಶಕರಾಗಿ, ನಟನಾಗಿ ಬಹಳ ವರ್ಷದಿಂದ ಚಿತ್ರರಂಗದಲ್ಲಿದ್ದಾರೆ. ಕನ್ನಡದಲ್ಲಿ ಸಾವಿರಾರು ಅದ್ಭುತ ಹಾಡುಗಳನ್ನು ರಚಿಸಿದ್ದಾರೆ.