Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ ನಾಗೇಂದ್ರ ಪ್ರಸಾದ್ಗೆ ಡಾಕ್ಟರೇಟ್ ನೀಡಿದ ಹಂಪಿ ವಿಶ್ವವಿದ್ಯಾಲಯ
ಕನ್ನಡ ಚಿತ್ರರಂಗದ ಕವಿರತ್ನ, ಅದ್ಭುತ ಗೀತಾ ರಚನೆಕಾರ, ಸಂಗೀತ ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
'ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ' ಎಂಬ ವಿಷಯ ಕುರಿತು ಸಂಶೋಧನೆ ಅಧ್ಯಯನ ನಡೆಸಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು.
'ವಿಷ್ಣು ಸಹೋದರ ರವಿ ಹೇಳಿದ 'ಆ ಮಾತು' ನನ್ನ ಕಿವಿಯಲ್ಲಿ ರಿಂಗಣಿಸುತ್ತಿದೆ'
ನಾಗೇಂದ್ರ ಪ್ರಸಾದ್ ಅವರ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ತನ್ನ 29ನೇ ಘಟಿಕೋತ್ಸವ (ನುಡಿಹಬ್ಬ)ದಲ್ಲಿ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿ ನೀಡಿದೆ. ಇಂದು ಬಳ್ಳಾರಿಯಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ 29ನೇ ಘಟಿಕೋತ್ಸವ ಕಾರ್ಯಕ್ರಮ ನಡೆದಿದೆ.
ಸಹಜವಾಗಿ ಚಿತ್ರರಂಗದಲ್ಲಿ ತಾವು ಮಾಡಿದ ಸಾಧನೆ ಅಥವಾ ತಮ್ಮ ಕೊಡುಗೆ ಗುರುತಿಸಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿರುವ ಉದಾಹರಣೆಗಳಿವೆ. ಆದರೆ, ನಾಗೇಂದ್ರ ಪ್ರಸಾದ್ ಅವರು ವಿದ್ಯಾರ್ಥಿಯಂತೆ ಸಂಶೋಧನೆ ನಡೆಸಿ ಮಹಾಪ್ರಬಂಧ ರಚಿಸಿ ಅದಕ್ಕೆ ಪದವಿ ಪಡೆದಿರುವುದು ನಿಜಕ್ಕೂ ಶ್ಲಾಘನೀಯ.
Recommended Video
'ಕವಿರತ್ನ' ಎಂದು ಗುರುತಿಸಿಕೊಂಡಿರುವ ವಿ ನಾಗೇಂದ್ರ ಪ್ರಸಾದ್ ಅವರು ಗೀತೆ ರಚನೆ, ಸಂಭಾಷಣೆ ಬರಹಗಾರರಾಗಿ, ಚಲನಚಿತ್ರ ನಿರ್ದೇಶಕರಾಗಿ, ನಟನಾಗಿ ಬಹಳ ವರ್ಷದಿಂದ ಚಿತ್ರರಂಗದಲ್ಲಿದ್ದಾರೆ. ಕನ್ನಡದಲ್ಲಿ ಸಾವಿರಾರು ಅದ್ಭುತ ಹಾಡುಗಳನ್ನು ರಚಿಸಿದ್ದಾರೆ.