Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
500ನೇ ಸಿನಿಮಾ: ನಾಯಕ ನಟನ ಪಾತ್ರದಲ್ಲಿ ಬಿರಾದರ್
ಕನ್ನಡ ಸಿನಿರಂಗದ ಹಿರಿಯ, ಪ್ರತಿಭಾವಂತ ನಟ ವೈಜನಾಥ ಬಿರಾದರ್ ಅವರ 500ನೇ ಸಿನಿಮಾದ ಚಿತ್ರೀಕರಣ ಈಗಷ್ಟೆ ಮುಗಿದಿದೆ.
'90 ಹೊಡೆ ಮನೀಗ್ ನಡಿ' ಹೆಸರಿನ ಸಿನಿಮಾದಲ್ಲಿ ಬಿರಾದರ್ ಅವರು ನಟಿಸಿದ್ದು, ಇದು ಅವರ ನಟನಾ ವೃತ್ತಿ ಜೀವನದ 500 ನೇ ಸಿನಿಮಾ. ಈ ಸಿನಿಮಾದಲ್ಲಿ ಬಿರಾದರ್ ಅವರೇ ನಾಯಕ.
ಈ ಹಿಂದೆ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ್ದ 'ಕನಸೆಂಬ ಕುದುರೆಯನೇರಿ' ಸಿನಿಮಾದಲ್ಲಿ ಬಿರಾದರ್ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿನ ಅವರ ನಟನೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ರಾಷ್ಟ್ರಪ್ರಶಸ್ತಿ ನಿರೀಕ್ಷಿಸಲಾಗಿತ್ತಾದರೂ ಆ ಬಾರಿ ಅಮಿತಾಬ್ ಬಚ್ಚನ್ ಅವರಿಗೆ ರಾಷ್ಟ್ರಪ್ರಶಸ್ತಿ ಒಲಿಯಿತು.
ಇನ್ನು '90 ಹೊಡಿ ಮನೀಗ್ ನಡಿ' ಸಿನಿಮಾಕ್ಕೆ ಮರಳುವುದಾದರೆ, ಶೀರ್ಷಿಕೆಯೇ ಹೇಳುತ್ತಿರುವಂತೆ ಇದು ಹಾಸ್ಯಪ್ರಧಾನ ಸಿನಿಮಾ ಜೊತೆಗೆ ಕುಡಿತದ ವಿರುದ್ಧ ಸಂದೇಶವೂ ಸಿನಿಮಾದಲ್ಲಿ ಇರಲಿದೆ.
ಸಿನಿಮಾದಲ್ಲಿ ಬಿರಾದರ್ ಜೊತೆಗೆ ನಟ ಕರಿಸುಬ್ಬು, ಡೇರಿಂಗ್ ಸ್ಟಾರ್ ಧರ್ಮಣ್ಣ, ಪ್ರಶಾಂತ್ ಸಿದ್ಧಿ, ಅಭಯ್ ವೀರ್, ಆರ್ಡಿ ಬಾಬು, ವಿವೇಕ್ ಜಂಬಗಿ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾವನ್ನು ಬೆಂಗಳೂರು, ಬಿಡದಿ, ಬಾಗಲಕೋಟೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.
Recommended Video
ಸಿನಿಮಾವನ್ನು 'ಅಮ್ಮ ಟಾಕೀಸ್ ಬಾಗಲಕೋಟೆ' ನಿರ್ಮಾಣ ಸಂಸ್ಥೆಯ ರತ್ನಮಾಲಾ ಬಾದರದಿನ್ನಿ ಅವರು ನಿರ್ಮಾಣ ಮಾಡಿದ್ದಾರೆ. ಉಮೇಶ್ ಬಾದರದಿನ್ನಿ, ನಾಗರಾಜ್ ಅರೆಹೊಳೆ ಅವರುಗಳು ಸಿನಿಮಾಕ್ಕೆ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ.