Don't Miss!
- News ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್ 2' ಮೊದಲ ಶೋ ಟಿಕೆಟ್ ಕೊಡ್ತೀನಂದ್ರು ಪ್ರಶಾಂತ್ ನೀಲ್: ಯಾರಿಗೆ? ಯಾಕೆ?
'ಕೆಜಿಎಫ್ 2' ಸಿನಿಮಾದ ಬಿಡುಗಡೆಗೆ ಈಗಾಗಲೇ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಸಿನಿಮಾ ಬಿಡುಗಡೆ ದಿನವಂತೂ ಟಿಕೆಟ್ಗಾಗಿ ನೂಕು-ನುಗ್ಗಲು ಖಾಯಂ. ಒಂದು ಟಿಕೆಟ್ಗಾಗಿ ಸಾವಿರಾರುಗಟ್ಟಲೆ ವ್ಯಯಿಸಲು ಸಹ ಅಭಿಮಾನಿಗಳು ತಯಾರಾಗಿರುತ್ತಾರೆ.
ಆದರೆ 'ಕೆಜಿಎಫ್ 2' ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್ ಮಾತ್ರ ಸಿನಿಮಾದ ಬಿಡುಗಡೆ ದಿನ ಮೊದಲ ಶೋಗೆ ಟಿಕೆಟ್ ಅನ್ನು ನೀಡುವುದಾಗಿ ಅಭಿಮಾನಿಯೊಬ್ಬರಿಗೆ ಭರವಸೆ ನೀಡಿದ್ದಾರೆ.
ವೈವಸ್ವತ್ ತಾಂಡುಲ ಎಂಬ 12ನೇ ತರಗತಿ ವಿದ್ಯಾರ್ಥಿಯೊಬ್ಬ 'ಕೆಜಿಎಫ್ 2' ನಿರ್ಮಾಣ ಸಂಸ್ಥೆ ಹೊಂಬಾಳೆಗೆ ಪತ್ರವೊಂದನ್ನು ಬರೆದಿದ್ದು, 'ಹೊಂಬಾಳೆ', 'ಕೆಜಿಎಫ್ 2' ಎಂದು ಅಕ್ಕಿ ಕಾಳಿನ ಮೇಲೆ ಸುಂದರವಾಗಿ ಬರೆದು ಅದನ್ನು ಉಡುಗೊರೆಯಾಗಿ ನೀಡಿದ್ದಾರೆ.
ಪತ್ರದಲ್ಲಿ ಹೊಂಬಾಳೆ ಫಿಲಮ್ಸ್ನಿಂದ ಹೊರಬರುತ್ತಿರುವ ಸಿನಿಮಾಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಿದ್ಯಾರ್ಥಿ ವೈವಸ್ವತ್ ತಾಂಡುಲ, ''ನಿಮ್ಮ ಎಲ್ಲ ಸಿನಿಮಾಗಳನ್ನು ನೋಡಿದ್ದೇನೆ, ಮೆಚ್ಚಿಕೊಂಡಿದ್ದೇನೆ. 'ಕೆಜಿಎಫ್ 2' ಸಿನಿಮಾವು ದೊಡ್ಡ ಯಶಸ್ಸು ಗಳಿಸಲಿ'' ಎಂದು ಹಾರೈಸಿದ್ದಾರೆ.
ವೈವಸ್ವತ್ ತಾಂಡುಲಾ ಅಕ್ಕಿಕಾಳಿನ ಮೇಲೆ ಬರವಣಿಗೆ ಮಾಡುವ ಅಪರೂಪದ ಕಲಾವಿದನಾಗಿದ್ದು, ವೈವಸ್ವತ್ನ ಪ್ರತಿಭೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ದೊರೆತಿದೆ ಜೊತೆಗೆ ರಾಜ್ಯ ಪ್ರಶಸ್ತಿಯೂ ದೊರೆತಿದೆ.
Recommended Video
ವೈವಸ್ವತ್ನ ಉಡುಗೊರೆಯಿಂದ ಖುಷಿಯಾಗಿರುವ ನಿರ್ದೇಶಕ ಪ್ರಶಾಂತ್ ನೀಲ್, 'ಕೆಜಿಎಫ್ 2' ಸಿನಿಮಾದ ಮೊದಲ ದಿನದ ಮೊದಲ ಶೋಗೆ ಟಿಕೆಟ್ ನೀಡುವುದಾಗಿ ಟ್ವಿಟ್ಟರ್ನಲ್ಲಿ ಭರವಸೆ ನೀಡಿದ್ದಾರೆ. ಹೊಂಬಾಳೆ ಫಿಲಮ್ಸ್ ಸಹ ವೈವಸ್ವತ್ ಕಳಿಸಿರುವ ಉಡುಗೊರೆಯ ಚಿತ್ರ ಹಾಗೂ ವೈವಸ್ವತ್ ಬರೆದಿರುವ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.