Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿತೆರೆಗೆ ಶಾಸಕ ವರ್ತೂರು ಪ್ರಕಾಶ್ ಪುತ್ರರತ್ನ
'ಕುಂಭ ರಾಶಿ' ಚಿತ್ರದಲ್ಲಿ ಎಂಟು ಪ್ಯಾಕ್ ದೇಹ ಪ್ರದರ್ಶಿಸಿರುವ ಚೇತನ್ ಚಂದ್ರ ಈ ಚಿತ್ರದ ನಾಯಕ ನಟ. ಐಶ್ವರ್ಯಾ ನಾಗ್ ಚಿತ್ರದ ನಾಯಕಿ. ಟಿವಿ ಪತ್ರಕರ್ತೆಯಾಗಿ ಐಶ್ವರ್ಯಾ ಚಿತ್ರದಲ್ಲಿ ಕಾಣಿಸಲಿದ್ದಾರೆ. ಕೆ ರಾಮಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ರವಿ ತೇಜ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ.
ವರ್ತೂರು ತೇಜಸ್ ಈಗಾಗಲೆ ಅಭಿನಯದಲ್ಲಿ ಒಂದಷ್ಟು ತರಬೇತಿಯನ್ನೂ ಪಡೆದಿದ್ದಾರಂತೆ. ಚಾಮರಾಜ ಸಂಸ್ಥೆಯಲ್ಲಿ ಡಾನ್ಸ್, ಫೈಟ್ಸ್ ಹಾಗೂ ಅಭಿನಯದ ಅಆಇಈ ಕಲಿತಿದ್ದಾಗಿ ತೇಜಸ್ ತಿಳಿಸಿದ್ದಾರೆ. ಇದೊಂದು ಸಂಪೂರ್ಣ ಮಜರಂಜನೆಯ, ಆಕ್ಷನ್ ಜೊತೆಗೆ ಸಂದೇಶ ಸಹ ಚಿತ್ರದಲ್ಲಿರುತ್ತದೆ.
ಜಗದೀಶ್ ವಾಲಿ ಅವರ ಛಾಯಾಗ್ರಹಣ ಹಾಗೂ ಮಣಿಕಾಂತ್ ಕದ್ರಿ ಅವರ ಸಂಗೀತ ಚಿತ್ರಕ್ಕಿದೆ. ವೆಂಕಟ್ ಅವರ ಸಂಭಾಷಣೆ ಇರುವ ಚಿತ್ರದಲ್ಲಿ ರೂಪಿಕಾ, ಆನಂದ್, ಅಭಯ್, ಪ್ರಿಯಾಂಕಾ ಮುಂತಾದವರಿದ್ದಾರೆ.
ಬೆಂಗಳೂರನ್ನು ಹೆಲಿಕಾಪ್ಟರ್ ನಲ್ಲಿ ಸೆರೆಹಿಡಿಯಲಾಗಿದ್ದು ಚಿತ್ರದಲ್ಲಿ ಅದು ಪ್ರಮುಖ ಆಕರ್ಷಣೆಯಾಗಿ ನಿಲ್ಲಲಿದೆ ಎನ್ನುತ್ತಾರೆ ಜಗದೀಶ್ ವಾಲಿ. ಕಾರ್ ರೇಸರ್ ವೀಣಾ ಪೊನ್ನಪ್ಪ ಚಿತ್ರದಲ್ಲಿ ಕಾರು ರೇಸರ್ ಆಗಿಯೇ ಕಾಣಿಸಲಿದ್ದಾರೆ. (ಏಜೆನ್ಸೀಸ್)