Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ '2.0' ವಿರೋಧಿಸಿ ವಾಟಳ್ ನಾಗರಾಜ್ ಪ್ರತಿಭಟನೆ
Recommended Video
ಕರ್ನಾಟಕದಲ್ಲಿ ಪರಭಾಷೆ ಚಿತ್ರಗಳ ಹಾವಳಿಯನ್ನ ವಿರೋಧಿಸಿ ಕನ್ನಡ ಹೋರಾಟಗಾರ ವಾಟಳ್ ನಾಗರಾಜ್ ಇಂದು (ನವೆಂಬರ್ 29) ಬೆಂಗಳೂರಿನ ಊರ್ವಶಿ ಚಿತ್ರಮಂದಿರದ ಬಳಿ ಪ್ರತಿಭಟನೆ ಮಾಡಿದ್ರು.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ '2.0' ಸಿನಿಮಾ ಇಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚು ಸಂಖ್ಯೆಯ ಥಿಯೇಟರ್ ನಲ್ಲಿ ರಿಲೀಸ್ ಆಗಿದೆ ಎಂಬ ಕಾರಣಕ್ಕೆ '2.0' ಚಿತ್ರದ ಪ್ರದರ್ಶನವನ್ನ ವಿರೋಧಿಸಿದ್ದಾರೆ.
ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರಕ್ಕೆ ನುಗ್ಗಿ ಶೋ ನಿಲ್ಲಿಸುವ ಪ್ರಯತ್ನ ಮಾಡಿದ್ರು. ಈ ವೇಳೆ ಸ್ಥಳದಲ್ಲೇ ಪೊಲೀಸರು ವಾಟಳ್ ನಾಗರಾಜ್ ಅವರನ್ನ ತಡೆದ, ವಶಕ್ಕೆ ಪಡೆದುಕೊಂಡರು.
ತಮಿಳು ನಟ ಸಿಂಬು ಮಾತಿಗೆ ವಾಟಾಳ್ ನಾಗರಾಜ್ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಬಳಿಕ ಮಾತನಾಡಿದ ವಾಟಳ್ ನಾಗರಾಜ್, ''ಕನ್ನಡ ನೆಲದಲ್ಲಿ ಬೇರೆ ಭಾಷೆಯ ಚಿತ್ರಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿರುವುದಕ್ಕೆ ಕಾರಣ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ. ಅಲ್ಲಿರುವ ಅನೇಕರು ತಮಿಳು ಮತ್ತು ಬೇರೆ ಭಾಷೆಯ ಚಿತ್ರಗಳನ್ನ ತಯಾರಿಸುತ್ತಾರೆ. ಪರಭಾಷೆ ಚಿತ್ರಗಳನ್ನ ತಂದು ಬಿಡುಗಡೆ ಮಾಡ್ತಾರೆ, ಇದರಿಂದ ಕರ್ನಾಟಕದಲ್ಲಿ ಕನ್ನಡ ಸಿನಿಮಾಗಳಿಗೆ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ'' ಎಂದು ಕಿಡಿಕಾರಿದರು.
ಕಾವೇರಿ ವಿವಾದ: ವಾಟಾಳ್ ಹೇಳಿಕೆಗೆ ರಜನಿಕಾಂತ್ ಕೊಟ್ಟ ಉತ್ತರ ನೋಡಿ
ಇನ್ನು 'ವಾಣಿಜ್ಯ ಮಂಡಳಿಯ ಕ್ರಮವನ್ನ ವಿರೋಧಿಸಿ ಡಿಸೆಂಬರ್ 1 ರಂದು ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ಮಾಡಲಿದ್ದೇವೆ ಮತ್ತು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಲಿದ್ದೇವೆ' ಎಂದು ತಿಳಿಸಿದರು.
ಈ ಕಡೆ ರಜನಿಕಾಂತ್ ಅಭಿನಯದ '2.0' ಸಿನಿಮಾ ಕರ್ನಾಟಕ ರಾಜ್ಯದಲ್ಲಿ 900ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿದೆ. ಅಂಬರೀಶ್ ನಿಧನದ ಹಿನ್ನೆಲೆ ಚಿತ್ರಮಂದಿರದ ಬಳಿ ಸಂಭ್ರಮ ಬೇಡ ಎಂದು ರಜನಿಕಾಂತ್ ಸೂಚಿಸಿದ್ದರು. ಹಾಗಾಗಿ, ಎಂದಿನಂತರ ರಜನಿ ಚಿತ್ರಗಳಿದ್ದ ಸಂಭ್ರಮ, ಕಟೌಟ್ ಇಂದು ಇರಲಿಲ್ಲ.