Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ನಟ ಸಿಂಬು ಮಾತಿಗೆ ವಾಟಾಳ್ ನಾಗರಾಜ್ ಕೊಟ್ಟ ಪ್ರತಿಕ್ರಿಯೆ ಹೀಗಿದೆ
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮತ್ತೆ ಕಾವೇರಿ ಕೂಗು ಹೆಚ್ಚಾಗಿದೆ. ತಮಿಳು ನಾಡಿನಲ್ಲಿ ಕಾವೇರಿ ನದಿ ನೀರಿನ ಹಂಚಿಕೆ ಬಗ್ಗೆ ಪ್ರತಿಭಟನೆ ನಡೆಯುತ್ತಿದೆ. ಮತ್ತೊಂದು ಕಡೆ ನಟ ಸಿಂಬು ಕಾವೇರಿ ಬಗ್ಗೆ ಒಂದು ಹೇಳಿಕೆ ನೀಡಿದ್ದಾರೆ. ಇತ್ತ ಹಿರಿಯ ನಟ ಅನಂತ್ ನಾಗ್ ಕೂಡ ಕಾವೇರಿ ಹೋರಟಕ್ಕೆ ಟೊಂಕ ಕಟ್ಟಿ ನಿಂತಿದ್ದೇನೆ ಎಂದು ಘೋಷಿಸಿದ್ದಾರೆ.
ಪ್ರಮುಖವಾಗಿ ನಿನ್ನೆ ಸಿಂಬು ನೀಡಿದ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದೆ. ಈ ಹೇಳಿಕೆ ಕೇಳಿ ಕನ್ನಡದ ಜನರು ತುಂಬ ಖುಷಿ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಿಂಬು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ಇನ್ನು ಸಿಂಬು ಕೊಟ್ಟ ಹೇಳಿಕೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕೂಡ ಸಂತಸಗೊಂಡಿದ್ದಾರೆ.
ಸಿಂಬು ಹೇಳಿಕೆ ಬಳಿಕ ಕಾವೇರಿ ಬಗ್ಗೆ ಅನಂತ್ ನಾಗ್ ಮಾತು !
ಅಂದಹಾಗೆ, ಸಿಂಬು ಹೇಳಿಕೆಯ ಬಗ್ಗೆ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್ ಸಿಂಬು ಧೈರ್ಯವನ್ನು ಮೆಚ್ಚಬೇಕು ಎಂದಿದ್ದಾರೆ. ಮುಂದೆ ಓದಿ...
ಸಿಂಬು ಮಾತನ್ನು ಸ್ವಾಗತ ಮಾಡುತ್ತೇನೆ
''ನಾನು ಕೂಡ ಕಾವೇರಿ ನದಿ ನೀರಿನ ಹಂಚಿಕೆ ಬಗ್ಗೆ ನಟ ಸಿಂಬು ಅವರು ಹೇಳಿದ ಮಾತನ್ನು ಕೇಳಿದೆ. ಅವರ ಆ ಮಾತನ್ನು ನಾನು ಸ್ವಾಗತ ಮಾಡುತ್ತೇನೆ. ಕನ್ನಡಿಗರು ಮತ್ತು ತಮಿಳುನಾಡಿನವರು ಜಗಳ ಮಾಡದೆ ಒಂದಾಣಿಕೆ ಮಾಡಿಕೊಂಡು ಹೋಗಬೇಕು ಎಂದು ಅವರು ಹೇಳಿದ್ದಾರೆ . ಇದು ಒಳ್ಳೆಯ ಬೆಳವಣಿಗೆ.'' ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ.
ಸಿಂಬು ಧೈರ್ಯ ಮೆಚ್ಚಬೇಕು
''ನಟ ಸಿಂಬು ಅವರ ಮಾತು ಕೇಳಿ ತುಂಬ ಸಂತೋಷ ಆಯ್ತು. ತಮಿಳು ನಾಡಿನ ಯಾವ ನಟ ಕೂಡ ಆ ರೀತಿ ಮಾತಗಳನ್ನು ಹೇಳಿಲ್ಲ. ಸಿಂಬು ತುಂಬ ಧೈರ್ಯವಾಗಿ ಮಾತನಾಡಿದ್ದಾರೆ. ಅದನ್ನು ನಾವು ಮೆಚ್ಚಬೇಕು. ಅವರ ಮಾತು ಅದ್ಬುತವಾಗಿತ್ತು.'' ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ.
ಕರ್ನಾಟಕದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ ತಮಿಳು ನಟನ ಭಾವನಾತ್ಮಕ ಭಾಷಣ.!
ಪ್ರೀತಿಯಿಂದ ನೀರು ಕೊಡಿ ಅಂತ ಕೇಳಬೇಕು
''ಬಹಳ ಹಿಂದೆ ಅನೇಕ ಬಾರಿ ಕರುಣಾನಿಧಿ ಕರ್ನಾಟಕಕ್ಕೆ ಬಂದು ಮಾತನಾಡಿದ್ದರು. ಮೊದಲ ಮಂಡಳಿ ರಚನೆ ಆದ ಮೇಲೆ ದ್ವೇಶ ಶುರು ಆಯ್ತು. ನಿರ್ವಾಹಣ ಮಂಡಳಿ ಮಾಡುವುದು ಬಿಡುವುದು ನಂತರ ವಿಷಯ. ಆದರೆ ಅದಕ್ಕೂ ಮುಂಚೆ ತಮಿಳು ನಾಡಿನ ಮುಖಂಡರು ಇಲ್ಲಿ ಬಂದು ಮಾತನಾಡಬೇಕು. ಪ್ರೀತಿಯಿಂದ ನೀರು ಕೊಡಿ ಅಂತ ಕೇಳಬೇಕು. ನಾವು ಬೇರೆಯಲ್ಲ ನೀವು ಬೇರೆಯಲ್ಲ ಅಂತ ಅವರು ಸಹ ಹೇಳಬೇಕು.'' ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ.
ನೀರಿನಲ್ಲಿ ರಾಜಕೀಯ ಮಾಡಬೇಡಿ
''ರಾಜಕೀಯ ಮಾಡಬೇಕು. ಆದರೆ, ಇದರಲ್ಲಿ ರಾಜಕೀಯ ಮಾಡಬಾರದು. ಕುಡಿಯುವ ನೀರಿನಲ್ಲಿ ರಾಜಕೀಯ ಮಾಡಿ ಅದರಲ್ಲಿ ತಮ್ಮ ರಾಜಕೀಯದ ಬದುಕನ್ನು ಬೆಳೆಸುವುದು ಒಳ್ಳೆಯದಲ್ಲ. ಕಾವೇರಿ ವಿಚಾರವಾಗಿ ನಾವು ಕೂಡ ಬಂದ್ ಮಾಡುವ ತಯಾರಿ ನಡೆಸಿದ್ವಿ. ಆದರೆ ಅದು ಮುಂದಕ್ಕೆ ಹೋಗಿದೆ. ಮೇ ಮೂರರ ನಂತರ ಬಂದ್ ಮಾಡುವ ಆಲೋಚನೆ ಇದೆ. - ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ.