Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಿತ್ಯ-ನಾಟಕ ರಂಗದ ಮೂಗಿಗೆ ತುಪ್ಪ ಸವರಿದ ಯಡಿಯೂರಪ್ಪ ಬಜೆಟ್
ಸಿಎಂ ಹಾಗೂ ಸ್ವತಃ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ ಅವರು ಇಂದು ಕರ್ನಾಟಕ ರಾಜ್ಯ ಬಜೆಟ್ 2021-22 ಅನ್ನು ವಿಧಾನಸೌಧದಲ್ಲಿ ಮಂಡಿಸಿದರು.
ಯಥಾವತ್ತು ಮಠಗಳು, ಜಾತಿ ಮಂಡಳಿಗಳು, ನಿಗಮಗಳಿಗೆ ಕೋಟ್ಯಂತರ ಹಣವನ್ನು ಬಜೆಟ್ನಲ್ಲಿ ಮೀಸಲಿಡಲಾಯಿತು. ಶಿಕ್ಷಣ, ಆರೋಗ್ಯ ಇನ್ನಿತರೆ ಪ್ರಮುಖ ಅಗತ್ಯಗಳಿಗೆ ಅನುದಾನಗಳನ್ನು ನೀಡಲಾಯಿತು. ಆದರೆ ಕೆಲವು ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದರೆ ಕೆಲವಕ್ಕೆ ಮೂಗಿಗೆ ತುಪ್ಪು ಸವರಲಾಯಿತು.
ಚಿತ್ರೋದ್ಯಮವನ್ನು ಈ ಬಜೆಟ್ನಲ್ಲಿ ನಿರ್ಮಲಕ್ಷಿಸಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಉಳಿದಂತೆ ಸಾಹಿತ್ಯ ಹಾಗೂ ನಾಟಕ ರಂಗಕ್ಕೆ ನಾಮ್ಕೆ ವಾಸ್ತೆ ಕಿರು ಯೋಜನೆಗಳನ್ನು ನೀಡಲಾಗಿದೆ.
ಸಾಹಿತಿ ಎಸ್.ಎಲ್.ಭೈರಪ್ಪ ಅವರ ಕೃತಿ 'ಪರ್ವ' ಅನ್ನು ರಂಗಕ್ಕೆ ಅಳವಡಿಸಿ ರಾಜ್ಯದಾದ್ಯಂತ ವಿವಿಧ ರಂಗತಂಡಗಳ ಮೂಲಕ ಪ್ರದರ್ಶಿಸಲು ಒಂದು ಕೋಟಿ ರುಪಾಯಿ ಹಣವನ್ನು ನೀಡುವುದಾಗಿ ಬಜೆಟ್ನಲ್ಲಿ ಹೇಳಿದರು ಯಡಿಯೂರಪ್ಪ.
ಅದರ ನಂತರ ಬೆಂಗಳೂರಿನ ಮಲ್ಲತ್ತಹಳ್ಳಿ ರಂಗ ಚಟುವಟಿಕೆ ಹಾಗೂ ಸಾಹಿತ್ಯ ಚಟುವಟಿಕೆಗೆ ಎರಡು ಕೋಟಿ ರೂಪಾಯಿ ಹಣ ಮೀಸಲಿಡುವುದಾಗಿ ಹೇಳಿದ್ದಾರೆ ಯಡಿಯೂರಪ್ಪ.
Recommended Video
ಆದಿಕವಿ ಪಂಪನಿಂದ ಮುದ್ದಣನ ಕಾಲಘಟ್ಟದ ವರೆಗೆ ಎಲ್ಲ ಕೃತಿಗಳ ಡಿಜಲೀಕರಣ ಹಾಗೂ ಆನ್ಲೈನ್ನಲ್ಲಿ ಲಭ್ಯವಾಗಿಸಲು ಕ್ರಮ ಕೈಗೊಳ್ಳುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಜೊತೆಗೆ ಮುಂಬರುವ ಹಾವೇರಿ ಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರವು ಭರಪೂರ ನೆರವು ನೀಡುವುದಾಗಿ ಹೇಳಿದ್ದಾರೆ ಯಡಿಯೂರಪ್ಪ.