Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಡಕಲ್ಲು ಗುಡ್ಡದ ಮೇಲೆ' ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ
Recommended Video
ಸಂತೋಷ ಹ ಹ..ಸಂಗೀತ ಹ ಹ ...ಎಂದು ಹಾಡು ಕೇಳಿದಾಗ ನೆನಪಾಗುತ್ತಿದ್ದ ನಟ ಚಂದ್ರಶೇಖರ್ ಇನ್ನು ನೆನಪು ಮಾತ್ರ. ಎಡಕಲ್ಲು ಗುಡ್ಡದ ಮೇಲೆ ಸಿನಿಮಾದಲ್ಲಿನ ನಂಜುಂಡ ಪಾತ್ರದ ಮೂಲಕ ಇಡೀ ಕನ್ನಡ ಸಿನಿಮಾರಂಗದ ಪ್ರೇಕ್ಷಕರನ್ನ ತನ್ನತ್ತ ಸೆಳೆದಿದ್ದ ನಟ ಚಂದ್ರಶೇಖರ್ ಇಂದು ಇಹಲೋಕ ತ್ಯಜಿಸಿದ್ದಾರೆ.
ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಕೆನಡಾಗೆ ಪ್ರಯಾಣ ಬೆಳೆಸಿದ್ದ ಚಂದ್ರಶೇಖರ್ ಅವರಿಗೆ ಕಾಲಿನಲ್ಲಿ ಬ್ಲಡ್ ಕ್ಲಾಟ್ ಆಗಿತ್ತು. ನಂತರ ಹೃದಯದಲ್ಲಿ ರಕ್ತದೊತ್ತಡ ಕಾಣಿಸಿಕೊಂಡು ಇಂದು ಮುಂಜಾನೆ ಕೆನಡಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಿನಿಮಾರಂಗದಲ್ಲಿ ಎಡಕಲ್ಲು ಗುಡ್ಡ ಚಂದ್ರಶೇಖರ್ ಹಾಗೂ ಕೆನಡಾ ಚಂದ್ರಶೇಖರ್ ಅಂತಾನೇ ಪ್ರಖ್ಯಾತಿ ಪಡೆದಿದ್ದರು . ಚಂದ್ರು ಅವರ ಪತ್ನಿ ಕೆನಡಾದಲ್ಲಿ ಭರತನಾಟ್ಯ ಶಾಲೆಯನ್ನ ನಡೆಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಚಂದ್ರಶೇಖರ್ ಮತ್ತು ಮಗಳು ತಾನ್ಯ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ವಾಸವಾಗಿದ್ದರು.
ಸುಮಾರು 70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಚಂದ್ರಶೇಖರ್ ಅಭಿನಯಿಸಿದ್ದರು. ಮಗಳು ತಾನ್ಯ ಅವರನ್ನ ಚಿತ್ರರಂಗಕ್ಕೆ ಪರಿಚಯಿಸುವ ಅಪಾರ ಆಸೆಯನ್ನ ಹೊಂದಿದ್ದರು. ಚಂದ್ರು ಅವರ ನಿಧನಕ್ಕೆ ಕನ್ನಡ ಸಿನಿಮಾರಂಗ ಕಂಬನಿ ಮಿಡಿದಿದ್ದು ಅಂತ್ಯ ಸಂಸ್ಕಾರದ ಬಗ್ಗೆ ಕುಟುಂಬಸ್ಥ ಇನ್ನು ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಸುದ್ದಿಗಳ ಪ್ರಕಾರ ಕೆನಡಾದಲ್ಲಿಯೇ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.