Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಜಯಂತಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ: ಆರೋಗ್ಯದಲ್ಲಿ ಚೇತರಿಕೆ
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕನ್ನಡದ ಹಿರಿಯ ನಟಿ ಜಯಂತಿ ಅವರು ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ. ಚಿಕಿತ್ಸೆಗೆ ಅವರು ಚೆನ್ನಾಗಿ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ.
Recommended Video
ಅಸ್ತಮಾದಿಂದ ಬಳಲುತ್ತಿರುವ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸಾಗಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವಿಕ್ರಂ ಆಸ್ಪತ್ರೆಯ ವೈದ್ಯ ಡಾ. ಸತೀಶ್ ಚಿಕಿತ್ಸೆ ನೀಡುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದು ತಂದಾಗ ನಿಯಮಾವಳಿಗಳಿಗೆ ಅನುಗುಣವಾಗಿ ಕೊರೊನಾ ವೈರಸ್ ಪರೀಕ್ಷೆ ಸಹ ಮಾಡಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದಿರುವುದು ಸಮಾಧಾನ ಮೂಡಿಸಿದೆ. ಮುಂದೆ ಓದಿ.
ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು
ಗಾಬರಿ ಪಡುವ ಅಗತ್ಯ ಇಲ್ಲ
ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗ ಹವಾಮಾನದಲ್ಲಿ ವ್ಯತ್ಯಾಸ ಆಗಿರುವುದರಿಂದ ಅವರಲ್ಲಿ ಸಹಜವಾಗಿಯೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದಕ್ಕೆ ಗಾಬರಿಪಡುವಂಥದ್ದು ಏನೂ ಇಲ್ಲ ಎಂದು ಜಯಂತಿ ಅವರ ಮಗ ಕೃಷ್ಣಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಅಸ್ತಮಾ ಹೆಚ್ಚು
ಜಯಂತಿ ಅವರಿಗೆ 70 ವರ್ಷ ದಾಟಿರುವ ಕಾರಣದಿಂದ ಕುಟುಂಬದವರಲ್ಲಿ ಆತಂಕ ಹೆಚ್ಚಿತ್ತು. ಬೆಂಗಳೂರಿನ ವಾತಾವರಣದಲ್ಲಿ ಅಸ್ತಮಾ ಸಮಸ್ಯೆಯಿದ್ದಾಗ ಕಷ್ಟವಾಗುತ್ತದೆ. ಅದರಲ್ಲಿಯೂ ಮಳೆಗಾಲದಲ್ಲಿ ಅದರ ತೀವ್ರತೆ ಹೆಚ್ಚು ಎಂದು ಅವರು ತಿಳಿಸಿದ್ದಾರೆ.
ಲಾಕ್ಡೌನ್ ನಡುವೆ ಹಂಪಿಯಿಂದ ಬೆಂಗಳೂರು ತಲುಪಿದ ನಟಿ ಜಯಂತಿ
ಪರೀಕ್ಷೆಯಲ್ಲಿ ನೆಗೆಟಿವ್
ಆಸ್ಪತ್ರೆಗೆ ಕರೆತರುವಾಗ ಕೊರೊನಾ ವೈರಸ್ ಭಯವಿತ್ತು. ಅದಕ್ಕೆ ದಾಖಲು ಮಾಡಿದ ತಕ್ಷಣ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿಯಲ್ಲಿ ನೆಗೆಟಿವ್ ಬಂದಿರುವುದು ಸಮಾಧಾನ ಮೂಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಎರಡು ವರ್ಷದ ಹಿಂದೆಯೂ ಉಲ್ಬಣಿಸಿತ್ತು
2018ರ ಮಾರ್ಚ್ ತಿಂಗಳಲ್ಲಿ ಸಹ ಜಯಂತಿ ಅವರಲ್ಲಿ ಅಸ್ತಮಾ ಉಲ್ಬಣಗೊಂಡಿತ್ತು. ಆಗಲೂ ಅವರಿಗೆ ವಿಕ್ರಂ ಆಸ್ಪತ್ರೆಯಲ್ಲಿ ವೈದ್ಯ ಡಾ. ಸತೀಶ್ ಚಿಕಿತ್ಸೆ ನೀಡಿದ್ದರು. ಆಗ ಅವರು ಚೇತರಿಸಿಕೊಂಡು ಬಿಡುಗಡೆಯಾಗಿದ್ದರು. ಲಾಕ್ ಡೌನ್ ಆರಂಭಕ್ಕೂ ಮುನ್ನ ಕಾರ್ಯಕ್ರಮದ ಸಲುವಾಗಿ ಹಂಪಿಗೆ ತೆರಳಿದ್ದ ಅವರು ಅಲ್ಲಿಯೇ ಒಂದು ತಿಂಗಳು ಸಿಲುಕಿಕೊಂಡಿದ್ದರು. ಬಳಿಕ ಅಧಿಕಾರಿಗಳ ನೆರವಿನಿಂದ ಬೆಂಗಳೂರಿನ ಮನೆಗೆ ಮರಳಿದ್ದರು.