Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ನಿರ್ದೇಶಕ ದೊರೈ ಭಗವಾನ್ ಮುಡಿಗೆ ಹೊಸ ಗರಿ
ಎಪ್ಪತ್ತು, ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಶ್ರೇಷ್ಠ ಚಿತ್ರಗಳನ್ನು ನೀಡಿದ ಗರಿಮೆ ದೊರೈ ಮತ್ತು ಭಗವಾನ್ ಜೋಡಿಗೆ ಸಲ್ಲುತ್ತದೆ. ಬಿ.ದೊರೈರಾಜು ಹಾಗೂ ಎಸ್.ಕೆ.ಭಗವಾನ್ (81) ಜೊತೆಯಾಗಿ ಕನ್ನಡ ಚಿತ್ರರಂಗಕ್ಕೆ ಮರೆಯಲಾಗದ ಚಿತ್ರಗಳನ್ನು ನೀಡಿದ್ದಾರೆ.
ದೊರೈ ಭಗವಾನ್ ಜೋಡಿ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದು ಅವುಗಳಲ್ಲಿ ಬಹುತೇಕ ವರನಟ ಡಾ.ರಾಜ್ ಕುಮಾರ್ ಅವರೇ ನಾಯಕ ನಟ. ಇನ್ನೊಂದು ವಿಶೇಷ ಎಂದರೆ 55 ಚಿತ್ರಗಳಲ್ಲಿ 23 ಚಿತ್ರಗಳು ಕಾದಂಬರಿ ಆಧಾರಿತ ಎಂಬುದು.
ಈ ಜೋಡಿ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಕುಟುಂಬಕ್ಕೆ ಬಹಳ ಹತ್ತಿರವಿದ್ದ ಕಾರಣ 30 ಚಿತ್ರಗಳನ್ನು ನಿರ್ದೇಶಿಸುವಂತಾಯಿತು. ಎಸ್.ಕೆ.ಭಗವಾನ್ ಅವರ ಪೂರ್ಣ ಹೆಸರು ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್.
ಎಸ್.ಕೆ.ಭಗವಾನ್ ಅವರು ಕನ್ನಡದಲ್ಲಿ ಅತ್ಯಧಿಕ ಕಾದಂಬರಿ ಆಧಾರಿತ ಚಿತ್ರಗಳನ್ನು ನೀಡಿದ ನೆನಪಿಗೆ ಅವರನ್ನು ಜುಲೈ 12ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಇಂದು ಬೆಳಗ್ಗೆ 11.30ಕ್ಕೆ ನಡೆದ ಕಾರ್ಯಕ್ರಮದಲ್ಲಿ "ಕನ್ನಡ ಕಾದಂಬರಿ ಆಧಾರಿತ ಚಲನಚಿತ್ರಗಳ ಪಿತಾಮಹ" ಬಿರುದನ್ನು ನೀಡಿ ಗೌರವಿಸಲಾಯಿತು.
ಬ್ರಾಹ್ಮಣ ಅಯ್ಯಂಗಾರಿ ಸಮುದಾಯದಲ್ಲಿ ಜನಿಸಿದ ಭಗವಾನ್ ಯುವ ವಯಸ್ಸಿನಲ್ಲಿ ಹಿರಣ್ಣಯ್ಯ ಮಿತ್ರಮಂಡಳಿಯಲ್ಲಿ ರಂಗ ಕಲಾವಿದರಾಗಿ, ಬಳಿಕ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಸಹಾಯಕರಾಗಿ 'ಭಾಗ್ಯೋದಯ' (1956) ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟವರು.
ಕನ್ನಡದ ಮೊಟ್ಟ ಮೊದಲ ಜೇಮ್ಸ್ ಬಾಂಡ್ ಶೈಲಿ ಚಿತ್ರ 'ಜೇಡರ ಬಲೆ' ನೀಡಿದ ಖ್ಯಾತಿ ದೊರೈ ಭಗವಾನ್ ಜೋಡಿಗೆ ಸಲ್ಲುತ್ತದೆ. ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಾಳಿಮಾತು, ಹೊಸಬೆಳಕು, ಬೆಂಕಿಯ ಬಲೆ, ಜೀವನ ಚೈತ್ರ ಚಿತ್ರಗಳನ್ನು ಹೆಸರಿಸಬಹುದು.
ದೊರೈ ಭಗವಾನ್ ಜೋಡಿಯ ಕಾದಂಬರಿ ಆಧಾರಿತ ಚಿತ್ರಗಳು ಹೀಗಿವೆ...ಎರಡು ಕನಸು (ವಾಣಿ ಅವರ ಕಾದಂಬರಿ), ಬಯಲು ದಾರಿ (ಭಾರತಿಸುತ), ಗಾಳಿಮಾತು, ಬೆಂಕಿಯ ಬಲೆ, ಬಿಡುಗಡೆಯ ಬೇಡಿ, ಚಂದನದಗೊಂಬೆ (ತ.ರಾ.ಸು), ಹೊಸಬೆಳಕು (ವಾಣಿ), ಸಮಯದ ಗೊಂಬೆ (ಚಿತ್ರಲೇಖ), ಜೀವನಚೈತ್ರ (ವಿಶಾಲಾಕ್ಷಿ ದಕ್ಷಿಣಮೂರ್ತಿ) ಮುಂತಾದ ಚಿತ್ರಗಳನ್ನು ಹೆಸರಿಸಬಹುದು. ಸದ್ಯಕ್ಕೆ ವಿಶ್ರಾಂತ ಜೀವನ ನಡೆಸುತ್ತಿದ್ದರೂ ಆದರ್ಶ ಫಿಲಂ ಇನ್ಸ್ ಟಿಟ್ಯೂಟ್ ನ ಪ್ರಾಂಶುಪಾಲರಾಗಿ ಚಟುವಟಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಭಗವಾನ್. (ಒನ್ಇಂಡಿಯಾ ಕನ್ನಡ)