Don't Miss!
- News ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಭೇಟಿ ಕೊಟ್ಟು ಪ್ರಚಾರ ಆರಂಭಿಸಿದ ಕೆಎಸ್ ಈಶ್ವರಪ್ಪ!
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ ಚಿತ್ರಕ್ಕೆ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್ ಸ್ನೇಹಿತ
'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಮತ್ತು 'ರಾಜಕುಮಾರ' ನಂತರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲಕ್ಕೆ ಇತ್ತೀಚಿಗಷ್ಟೆ ಉತ್ತರ ನೀಡಿದ್ದರು. ಮೂರನೇ ಸಿನಿಮಾವನ್ನ ಪುನೀತ್ ರಾಜ್ ಕುಮಾರ್ ಜೊತೆಯಲ್ಲೇ ಮಾಡ್ತಿದ್ದೀನಿ ಅಂತ ಹೇಳಿದ್ರು.
ಇದೀಗ, ತಮ್ಮ ಸ್ನೇಹಿತ, ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಸಹ ನಿರ್ದೇಶಕನ ಹೊಸ ಚಿತ್ರದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಹೌದು, ಸಂತೋಷ್ ಆನಂದ್ ರಾಮ್ ಅವರ ಜೊತೆ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಮತ್ತು 'ರಾಜಕುಮಾರ' ಚಿತ್ರಗಳಲ್ಲಿ ಬರಹಗಾರ ಹಾಗೂ ಸಹ ನಿರ್ದೇಶಕರಾಗಿದ್ದ ವಿಜಯ್ ನಾಗೇಂದ್ರ ಫುಲ್ ಟೈಂ ಡೈರೆಕ್ಟರ್ ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ.
ರಾಜಕೀಯ 'ದೊಂಬರಾಟ' ನೋಡಿ ಸಂತೋಷ್ ಆನಂದ್ ರಾಮ್ ಬೇಸರ
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಆಕ್ಷನ್ ಕಟ್ ಹೇಳುವ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ ವಿಜಯ್ ನಾಗೇಂದ್ರ. ಈ ಚಿತ್ರವನ್ನ ಹೆಚ್.ಎಲ್.ಎನ್ ರಾಜ್ ನಿರ್ಮಾಣ ಮಾಡುತ್ತಿದ್ದಾರೆ.
ಸದ್ಯ, ಈ ಚಿತ್ರದ ಫಸ್ಟ್ ಪೋಸ್ಟರ್ ಮಾತ್ರ ರಿಲೀಸ್ ಮಾಡಿದ್ದು, ಗೋಲ್ಡನ್ ಸ್ಟಾರ್ ಹುಟ್ಟುಹಬ್ಬಕ್ಕೆ ಚಿತ್ರದ ಟೈಟಲ್ ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಿದ್ದಾರೆ. ಅದನ್ನ ಬಿಟ್ಟರೇ ಕಥೆ ಹಾಗೂ ಇನ್ನಿತರ ವಿಷ್ಯಗಳ ಬಗ್ಗೆ ಏನು ಬಿಟ್ಟುಕೊಟ್ಟಿಲ್ಲ.
ಸಂತೋಷ್ ಆನಂದ್ ರಾಮ್ ಮನೆಗೆ ದಿಢೀರ್ ಭೇಟಿ ಕೊಟ್ಟ ಗಣೇಶ್
ಮತ್ತೊಂದೆಡೆ ಗಣೇಶ್ 'ಆರೆಂಜ್' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೊನೆಯದಾಗಿ ಸುನಿ ನಿರ್ದೇಶನದ 'ಚಮಕ್' ಚಿತ್ರದಲ್ಲಿ ಅಭಿನಯಿಸಿದ್ದರು. ಈ ಸಿನಿಮಾ ಶತದಿನವನ್ನ ಆಚರಿಸಿಕೊಂಡಿತ್ತು.