Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ ಪ್ರಕಾಶ್ ಬಳಿ ಕುಮಾರಸ್ವಾಮಿ ಬೇಡಿಕೆಯಿಟ್ಟ ಹಾಡಿದು
ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪೂರ್ಣ ಪ್ರಮಾಣದ ರಾಜಕಾರಣಿ. ರಾಜಕಾರಣಕ್ಕೆ ಬರುವ ಮುನ್ನ ಚಿತ್ರರಂಗದಲ್ಲಿ ಕೆಲಸ ಮಾಡಿದ್ದರು. ವಿತರಕರಾಗಿ, ಪ್ರದರ್ಶಕರಾಗಿ ನಂತರ ನಿರ್ಮಾಪಕರಾಗಿ ಸದಭಿರುಚಿಯ ಚಿತ್ರಗಳನ್ನ ನೀಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರಿಗೆ ಹಳೆಯ ಹಾಡುಗಳು ಅಂದ್ರೆ ತುಂಬಾ ಇಷ್ಟ. ರಾತ್ರಿ ಮಲಗುವಾಗಲೂ ಹಳೆಯ ಹಾಡುಗಳನ್ನ ಕೇಳುತ್ತಾ ಎಲ್ಲಾ ಜಂಜಾಟಗಳನ್ನ ಮರೆಯುತ್ತಾರಂತೆ.
ಇಂತಹ ಕುಮಾರಸ್ವಾಮಿಗೆ ಒಂದು ನೆಚ್ಚಿನ ಹಾಡಿದೆ. ಹಲವು ವೇದಿಕೆಗಳಲ್ಲಿ ಈ ಹಾಡನ್ನ ಸ್ವತಃ ಕುಮಾರಸ್ವಾಮಿ ಅವರೇ ಬೇಡಿಕೆಯಿಟ್ಟು ಹಾಡಿಸಿದ್ದಾರೆ. ಇದೀಗ, ಇಂತಹದ್ದೇ ಸಂದರ್ಭಕ್ಕೆ ಕಾರಣವಾಯಿತು ಮೈಸೂರಿನ ದಸರಾದ 'ಯುವ ದಸರಾ' ಕಾರ್ಯಕ್ರಮ.
ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರಿಂದ ರಸಮಂಜರಿ ಕಾರ್ಯಕ್ರಮವಿತ್ತು. ಈಗಿನ ಸೂಪರ್ ಹಿಟ್ ಹಾಡುಗಳನ್ನ ಹಾಡಿದ ವಿಜಯ ಪ್ರಕಾಶ್ ನೆರದಿದ್ದ ಅಭಿಮಾನಿಗಳನ್ನ, ಪ್ರೇಕ್ಷಕರನ್ನ ಕುಣಿಸಿದ್ದರು. ಇದೆಲ್ಲದರ ಮಧ್ಯೆ ವಿಶೇಷವಾಗಿ ಗಮನ ಸೆಳೆದಿದ್ದು ಈ ಹಾಡು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಒತ್ತಾಯದ ಮೆರೆಗೆ ವಿಜಯ ಪ್ರಕಾಶ್ ಅವರು 'ಒಳಿತು ಮಾಡು ಮನುಸಾ, ನೀ ಇರೋದು ಮೂರು ದಿವಸ' ಹಾಡನ್ನ ಹಾಡಿದರು.
ಮೊದಲನೇ ಸಲ ವಿಜಯ ಪ್ರಕಾಶ್ ಅವರು ಈ ಹಾಡನ್ನು ಹಾಡಿದರು. ಹಾಡು ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ಅವರು, ಹಾಡನ್ನು ಮತ್ತೊಮ್ಮೆ ಹಾಡುವಂತೆ ವಿಜಯ್ ಪ್ರಕಾಶ್ ಅವರಲ್ಲಿ ಮನವಿ ಮಾಡಿಕೊಂಡರು. ಅಂತೆಯೇ ವಿಜಯ್ ಪ್ರಕಾಶ್ ಮತ್ತೊಮ್ಮೆ ಸಿಎಂಗಾಗಿ ತಮ್ಮ ಸುಮಧುರ ಕಂಠದಲ್ಲಿ ಈ ಹಾಡು ಹಾಡಿದರು.
ಈ ಹಾಡು ಹಾಡುತ್ತಿದ್ದಂತೆ ಕುಮಾರಸ್ವಾಮಿ ಅವರು ಭಾವುಕರಾದರು. ಕಣ್ಣಿನ ಅಂಚಿನಲ್ಲಿ ಕಣ್ಣೀರು ಬಂದು ನಿಂತಿತ್ತು. ಈ ಹಾಡಿಗೆ ಈ ಹಿಂದೆ ಕೂಡ ಕುಮಾರಸ್ವಾಮಿ ಅವರು ಭಾವುಕರಾಗಿರುವುದುಂಟು.