Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎರಡು ಕನಸು'ಗೆ ಮಿಡಿದ ವಿಜಯ್ ರಾಘವೇಂದ್ರ ಮನಸ್ಸು
ಎಪ್ಪತ್ತರ ದಶಕದಲ್ಲಿ ದೊರೈ-ಭಗವಾನ್ ಜೋಡಿ ನಿರ್ದೇಶಿಸಿದ ದೃಶ್ಯಕಾವ್ಯ 'ಎರಡು ಕನಸು'. ವಾಣಿ ಅವರ ಅದೇ ಹೆಸರಿನ ಕಾದಂಬರಿ ಆಧಾರಿತ ಈ ಚಿತ್ರದ ಹಾಡುಗಳು ಇಂದಿಗೂ ಮನಸೂರೆಗೊಳ್ಳುವಂತಿವೆ.
ವರನಟ ಡಾ.ರಾಜ್ ಕುಮಾರ್, ಮಂಜುಳಾ, ಕಲ್ಪನಾ ಮುಖ್ಯಭೂಮಿಕೆಯಲ್ಲಿರುವ ಚಿತ್ರಕ್ಕೆ ರಾಜನ್ ನಾಗೇಂದ್ರ ಅವರ ಸಂಗೀತ ಝಲಕ್ ಮರೆಯಲು ಸಾಧ್ಯವೇ? ಬಾಡಿ ಹೋದ ಬಳ್ಳಿಯಿಂದ, ತಮ್ ನಂ ತಮ್ ನಂ, ಇಂದು ಎನಗೆ ಗೋವಿಂದ, ಪೂಜಿಸಲೆಂದೇ ಹೂಗಳ ತಂದೆ, ಎಂದು ನಿನ್ನ ನೋಡುವೆ ಹಾಡುಗಳು ಚಿತ್ರಕ್ಕೆ ವಿಶೇಷ ಮೆರುಗು ತಂದಿವೆ. [ಹೆಸರು ಬದಲಾಯಿಸಿಕೊಂಡ ವಿಜಯ ರಾಘವೇಂದ್ರ]
ಇದೀಗ ಇದೇ ಹೆಸರಿನ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಅಭಿನಯಿಸುತ್ತಿದ್ದಾರೆ. 'ಕೊಟ್ರೇಶಿ ಕನಸು' ಚಿತ್ರದ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ವಿಜಯ್ ರಾಘವೇಂದ್ರ ಇದೀಗ 'ಎರಡು ಕನಸು' ಕಾಣಲು ಮುಂದಾಗಿದ್ದಾರೆ. ಆದರೆ ಅಂದಿನ 'ಎರಡು ಕನಸು' (1974) ಚಿತ್ರಕ್ಕೂ ಇಂದಿನ ತಮ್ಮ ಚಿತ್ರದ ಕಥೆಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತದೆ ಚಿತ್ರತಂಡ. [ಸ್ಯಾಂಡಲ್ ವುಡ್ ಮಹಾ ಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಇದೊಂದು ಪಕ್ಕಾ ಲವ್ ಸ್ಟೋರಿ ಕಮ್ ಕೌಟುಂಬಿಕ ಕಥೆಯಾಧಾರಿತ ಚಿತ್ರ ಎನ್ನುತ್ತಾರೆ ವಿಜಯ್ ರಾಘವೇಂದ್ರ. ಇದೇ ಮೊದಲ ಬಾರಿಗೆ ಮದನ್ ಎಂಬುವವರು ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ. ಆಕಾಶ್ ಸ್ಟುಡಿಯೋದಲ್ಲಿ ಹಾಡಿನ ಧ್ವನಿಮುದ್ರಣದ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.