Don't Miss!
- News Lok Sabha Election 2024: ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ-ಯಾವ್ಯಾವಾಗ ಹಾಗೂ ಕಾರಣವೇನು?
- Technology ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ವಿಜಯಭಾಸ್ಕರ್ ವಿಧಿವಶ
ಬೆಂಗಳೂರು : ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಇನ್ನಿತರ ಭಾಷೆಯ 600ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದ ಹಿರಿಯ ಸಂಗೀತ ನಿರ್ದೇಶಕ ವಿಜಯಭಾಸ್ಕರ್ ಭಾನುವಾರ ಬೆಳಗ್ಗೆ 9.30ರಲ್ಲಿ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
'ಬೆಳ್ಳಿಮೋಡ", 'ನಾಗರಹಾವು", 'ಉಯ್ಯಲೆ", 'ಸಂತತುಕಾರಾಮ", 'ನಾಂದಿ", 'ಮಲಯಮಾರುತ", 'ಗೆಜ್ಜೆಪೂಜೆ", 'ಶರಪಂಜರ", 'ಮಾನಸಸರೋವರ", 'ಪಡುವಾರಹಳ್ಳಿ ಪಾಂಡವರು", 'ನಂದಗೋಕುಲ", 'ಮುಕ್ತಿ", 'ಎಲ್ಲಿಂದಲೋ ಬಂದವರು" ಮೊದಲಾದ 350ಕ್ಕೂ ಹೆಚ್ಚು ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ವಿಜಯಭಾಸ್ಕರ್ ಅವರಿಗೆ 77 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ
1935ರಲ್ಲಿ 'ಶ್ರೀರಾಮ ಪೂಜಾ" ಚಿತ್ರಕ್ಕೆ ಸಂಗೀತ ನೀಡಲು ಬಾಂಬೆಯಿಂದ ಬೆಂಗಳೂರಿಗೆ ಬಂದ ವಿಜಯಭಾಸ್ಕರ್ ಅವರ ಅತ್ಯುತ್ತಮ ಸಾಧನೆಯನ್ನು ಗಮನಿಸಿ ರಾಜ್ಯ ಸರಕಾರ ಡಾ. ರಾಜ್ಕುಮಾರ್ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. 'ಮಲಯಮಾರುತ" ಮತ್ತು 'ಮುರಳಿಗಾನ ಅಮೃತಪಾನ" ಸಂಗೀತ ಪ್ರಧಾನ ಚಿತ್ರಗಳಿಗೆ ಸಂಗೀತ ನೀಡಿ, ಕೇಂದ್ರ ಸರಕಾರದ 'ಸುರ್ ಸಿಂಗಾರ್" ಪುರಸ್ಕಾರ ಗಳಿಸಿದ್ದರು.
ವಿಜಯ ಭಾಸ್ಕರ್ ಸಂಗೀತ ನೀಡಿದ 'ಸಂತತುಕಾರಾಮ" ಚಿತ್ರದ 'ಜಯತು ಜಯ ವಿಠಲ", 'ನಾಂದಿ" ಚಿತ್ರದ 'ಹಾಡೊಂದ ಹಾಡುವೆ ನೀ ಕೇಳು ಮಗುವೆ..", 'ಬೆಳ್ಳಿ ಮೋಡದ" 'ಮೂಡಲ ಮನೆಯ ಮುತ್ತಿನ ನೀರಿನ ಎರಕಾವಾ ಹೊಯ್ದ" ಮೊದಲಾದ ಗೀತೆಗಳು ದಶಕಗಳ ನಂತರವೂ ಜನಮನದಲ್ಲಿ ಚಿರಸ್ಥಾಯಿಯಾಗಿ ಉಳಿದಿವೆ.
'ಕೆಂಪಾದವೋ ಎಲ್ಲ ಕೆಂಪಾದವೊ", 'ಉತ್ತರ ಧ್ರುವದಿಂ.. ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ", 'ಇವಳು ಯಾರು ಬಲ್ಲೆಯೇನು", 'ಕಾಳಿದಾಸನ ಕಾವ್ಯ ಲಹರಿಗೆ", 'ಹೆಜ್ಜೆ ಹೆಜ್ಜೆಗೂ ಹೊನ್ನೇ.. ಸುರಿಯಲಿ.. ಗೆಜ್ಜೆ ಪೂಜೆಯ.." 'ಮೌನವೇ ಆಭರಣ, ಮುಗುಳ್ನಗೆ ಶಶಿಕಿರಣ, ನೋಟವೇ ಹೂ ಬಾಣ", 'ಏನೊ ಕುರುಡು ಭಾವನೆ", 'ಪಂಚಮ ವೇದ ಪೇಮದ ನಾದ" ಮೊದಲಾದ ಗೀತೆಗಳು ವಿಜಯಭಾಸ್ಕರ್ರ ನೆನಪನ್ನು ಸದಾ ಹಸುರಾಗಿಸಿವೆ.
ವಿಜಯಭಾಸ್ಕರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಕಲಾವಿದರು, ಜೆ.ಪಿ. ನಗರದ ಅವರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು,
ಸಂತಾಪ : ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ವಾರ್ತಾ ಸಚಿವ ಎಂ. ಶಿವಣ್ಣ ಮೊದಲಾದವರು ವಿಜಯಭಾಸ್ಕರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸಂಗೀತ ಸಾರ್ವಭೌಮರೆನಿಸಿದ್ದ ಭಾಸ್ಕರ್ ನಿಧನದಿಂದ ಚಿತ್ರರಂಗ ಅಸಾಧಾರಣ ವ್ಯಕ್ತಿತ್ವದ ಪ್ರತಿಭಾವಂತನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕಲಾತ್ಮಕ ಚಿತ್ರಗಳು ಹಾಗೂ ಕಮರ್ಷಿಯಲ್ ಚಿತ್ರಗಳೆರಲ್ಲೂ ಕೆಲಸ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡ ವಿಜಯಭಾಸ್ಕರ್ ಅವರು ಸಂಗೀತ ನೀಡಿದ ಕೊನೆಯ ಚಿತ್ರ'ಶ್ರಾವಣ ಸಂಭ್ರಮ" ಇನ್ನೂ ಬಿಡುಗಡೆ ಆಗಬೇಕಿದೆ.(ಇನ್ಫೋ ವಾರ್ತೆ)