Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವಾಡ ಆಗಲಿ, ಆ ದೇವರು ವಿಜಿನಾ ನಮಗೆ ಕೊಟ್ಬಿಡ್ಲಿ: ವಿಜಯಲಕ್ಷ್ಮಿ ಭಾವುಕ
ಸಂಚಾರಿ ವಿಜಯ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ವಿಜಯಲಕ್ಷ್ಮಿ 'ಪವಾಡ ಏನಾದರೂ ಆಗಲಿ, ಉಳಿಸಿಕೊಳ್ಳಲು ಸಾಧ್ಯವಾದರೆ ದಯವಿಟ್ಟು ನಮ್ಮ ವಿಜಿ ಬ್ರೋನ ವಾಪಸ್ ಕೊಟ್ಬಿಡು ದೇವರೇ' ಎಂದು ಕೇಳಿಕೊಂಡಿದ್ದಾರೆ.
Recommended Video
ಸಂಚಾರಿ ವಿಜಯ್ ಆರೋಗ್ಯ ಪರಿಸ್ಥಿತಿ ಬಗ್ಗೆ ವಿಡಿಯೋ ಮೂಲಕ ಮಾತನಾಡಿದ ವಿಜಯಲಕ್ಷ್ಮಿ 'ಕಳೆದ ವರ್ಷ ನಾನು ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಮಯದಲ್ಲಿ ಸಂಚಾರಿ ವಿಜಯ್ ಮತ್ತು ಕಾರುಣ್ಯ ರಾಮ್ ನನ್ನ ಯೋಗಕ್ಷೇಮ ವಿಚಾರಿಸಿದವರಲ್ಲಿ ಮೊದಲಿಗರು. ತುಂಬಾ ಪ್ರೀತಿಯಿಂದ, ತುಂಬಾ ಆತ್ಮೀಯತೆಯಿಂದ ನನ್ನ ಭೇಟಿ ಮಾಡಿದರು. ವಿಜಯ್ ಭೇಟಿ ಬಳಿಕ ನನಗೊಬ್ಬ ಸಹೋದರ ಸಿಕ್ಕಿದ್ದರು. ವಿಜಯ್ ಬ್ರೋ ಎಂದು ಕರೆಯುತ್ತಿದ್ದೆ. ಈ ಸುದ್ದಿ ಕೇಳಿದಾಗನಿಂದಲೂ ಇದು ನಿಜ ಆಗಿರಬಾರದು ಅನಿಸುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾರು ಮಾರಿ ಜನರಿಗೆ ಸೇವೆ ಮಾಡೋಣ ಎಂದಿದ್ದ ಸಂಚಾರಿ ವಿಜಯ್: ಜಗ್ಗೇಶ್
'ವಿಜಿಗೆ ಹೀಗಾಗಿದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ವಿಜಿ ಬ್ರೋ ನಮ್ಮನ್ನು ಬಿಟ್ಟು ಹೋಗ್ಬೇಕು ಅಂತ ಏಕೆ ಅನಿಸಿತು. ಬಹಳ ಶೋಕದಲ್ಲಿದ್ದೇವೆ. ಪ್ರತಿಭಾನ್ವಿತ ನಟ ಜೊತೆಗೆ ಒಳ್ಳೆಯ ಮನುಷ್ಯ. ಕಲಾವಿದರು ಈ ರೀತಿ ದುರಂತ ಎದುರಿಸುವುದು ಬಹಳ ನೋವು ಉಂಟು ಮಾಡುತ್ತಿದೆ' ಎಂದು ಭಾವುಕರಾದರು.
'ದಯವಿಟ್ಟು ವಿಜಿ ಅವರಿಗೆ ಏನಾದರು ಪವಾಡ ಆಗಬಾರದೇ? ದೇವರೇ ಉಳಿಸಿಕೊಳ್ಳುವುದಕ್ಕೆ ಸಾಧ್ಯವಾದರೆ ವಿಜಿನಾ ಕೊಟ್ಬಿಡು. ನಾನು ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ. ಈ ಸುದ್ದಿ ನೋಡಲು ಸಹ ಸಾಧ್ಯವಾಗ್ತಿಲ್ಲ' ಎಂದು ನಟಿ ವಿಜಯಲಕ್ಷ್ಮಿ ವಿನಂತಿಸಿದರು.
ಅಂದ್ಹಾಗೆ, ವಿಜಯಲಕ್ಷ್ಮಿ ಇತ್ತೀಚಿಗಷ್ಟೆ ತಮ್ಮ ಸಹೋದರಿಗೆ ಸಹಾಯ ಕೋರಿ ವಿಡಿಯೋ ಮಾಡಿದ್ದರು. ಅದಕ್ಕೂ ಮುಂಚೆ ತಮಗೆ ಆರೋಗ್ಯ ಸರಿಯಿಲ್ಲ ಆರ್ಥಿಕ ಸಹಾಯ ಮಾಡಿದ್ದರು ಎಂದು ಅಂಗಲಾಚಿದ್ದರು. ಆ ಸಮಯದಲ್ಲಿ ಸಂಚಾರಿ ವಿಜಯ್, ಕಾರುಣ್ಯ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.