Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಸಿಸಿ ಕಪ್ ಚಾಂಪಿಯನ್ಸ್ ಆದ ಶಿವಣ್ಣ ಮತ್ತು ತಂಡ
ಸ್ಯಾಂಡಲ್ವುಡ್ ಕಲಾವಿದರೆಲ್ಲರೂ ಸೇರಿ ಆಡುತ್ತಿರುವ ಕನ್ನಡ ಚಲನಚಿತ್ರ ಕಪ್ ಯಶಸ್ವಿಯಾಗಿದೆ. ಆರಂಭದಲ್ಲಿಯೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಟೀಂ ಗೆಲುವಿನ ಮೂಲಕ ವಿಜಯ ಪತಾಕೆ ಹಾರಿಸಿದೆ.
ಶಿವರಾಜ್ಕುಮಾರ್ ಸ್ಟಾರ್ ಪ್ಲೇಯರ್ ಆಗಿದ್ದ 'ವಿಜಯನಗರ ಪೇಟ್ರಿಯಾಟ್ಸ್' ತಂಡ ಈ ಬಾರಿಯ ಕಪ್ ಗೆದ್ದು ವಿಜೇತರಾಗಿದ್ದಾರೆ. ಮೊದಲ ದಿನವೇ ಕಿಚ್ಚ ಸ್ಟಾರ್ ಪ್ಲೇಯರ್ ಆಗಿದ್ದ 'ಹೊಯ್ಸಳ ಈಗಲ್ಸ್'ನ ವಿರುದ್ಧ ಟೂರ್ನಿಯ ಮೊದಲ ಗೆಲುವು ಸಾದಿಸಿತ್ತು ಶಿವಣ್ಣ ಮತ್ತು ತಂಡ.
ಕಿಚ್ಚ ಸುದೀಪ್ ಬ್ಯಾಟಿಂಗ್, ಸೆಂಚುರಿ ಸ್ಟಾರ್ ಶಿವಣ್ಣ ಬೌಲಿಂಗ್
ಎರಡನೇ ಮ್ಯಾಚ್ನಲ್ಲಿ ಇಂದ್ರಜಿತ್ ಲಂಕೇಶ್ ಅವರ 'ರಾಷ್ಟ್ರಕೂಟ ಪ್ಯಾಂಥರ್ಸ್' ಎದುರು ಗೆಲುವು ಸಾಧಿಸಿ ಫೈನಲ್ ತಲುಪಿದ್ದರು. ಫಿನಾಲೆಯಲ್ಲಿ ಸಿನಿಮಾ ಪತ್ರಕರ್ತ ಸದಾಶಿವ ಶೆಣೈ ಅವರ 'ಒಡೆಯರ್ ಚಾರ್ಜರ್ಸ್' ವಿರುದ್ಧ ಗೆಲ್ಲುವ ಮೂಲಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಕನ್ನಡ ಚಲನಚಿತ್ರ ಕಪ್ ನ ಮೊದಲ ಸೀಸನ್ ಯಶಸ್ವಿಯಾಗಿದ್ದು, ಇಡೀ ಸಿನಿಮಾರಗಕ್ಕೆ ಖುಷಿತಂದಿದೆ. ಕಿಚ್ಚನ ಮೊದಲ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಟೂರ್ನಿ ಮುಗಿದ ನಂತರ ಅಲ್ಲೇ ಗೆಲುವು ಸಾಧಿಸಿದ ತಂಡಕ್ಕಾಗಿ ಅಭಿನಂದನಾ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಿಚ್ಚ ಹಾಡು ಹಾಡಿ ಅಭಿಮಾನಿಗಳನ್ನ ರಂಜಿಸಿದ್ರೆ, ಶಿವರಾಜ್ ಕುಮಾರ್ ಟಗರು ಸಿನಿಮಾದ ಹಾಡಿಗೆ ನೃತ್ಯ ಮಾಡುವ ಮೂಲಕ ಸಂಭ್ರಮವನ್ನ ಆಚರಣೆ ಮಾಡಿದರು.
ಕೆಸಿಸಿ ಕ್ರಿಕೆಟ್ ಟೂರ್ನಿಗೆ ಸಿದ್ಧರಾಮಯ್ಯ ಚಾಲನೆ : ಶಿವಣ್ಣ - ಸುದೀಪ್ ನಡುವೆ ಮೊದಲ ಪಂದ್ಯ