Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಮಾಣ ಮಾಡಿ ಹೇಳುತ್ತೇನೆ ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ: ನಿರ್ಮಾಪಕ ವಿಖ್ಯಾತ್ ಪ್ರತಿಕ್ರಿಯೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಚಿತ್ರೀಕರಣದಲ್ಲಿದ್ದ ಜಗ್ಗೇಶ್ ಅವರ ವಿರುದ್ಧ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿ ಸರಿಯಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಘಟನೆ ನಂತರ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
Recommended Video
ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್. ಹೌದು, ಇನ್ಸ್ ಪೆಕ್ಟರ್ ವಿಕ್ರಮ್ ಸಿನಿಮಾ ನಿರ್ಮಾಪಕ ವಿಖ್ಯಾತ್ ಜೊತೆ ಜಗ್ಗೇಶ್ ಮಾತಾಡಿರುವ ಆಡಿಯೋ ಲೀಕ್ ಆಗಿದ್ದೇ ಈ ವಿವಾದಕ್ಕೆ ಕಾರಣವಾಗಿದೆ. ಈ ಆಡಿಯೋದಲ್ಲಿ ಜಗ್ಗೇಶ್, ದರ್ಶನ್ ಬಗ್ಗೆ ಅವಹೇಳಕಾರಿ ಪದ ಬಳಸಿದ್ದಾರೆ ಎನ್ನುವುದು ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.
ವಿವಾದ ದೊಡ್ಡ ಮಟ್ಟದಲ್ಲಿ ಹೊತ್ತಿ ಉರಿಯುತ್ತಿದ್ದರೂ ಮೌನವಾಗಿದ್ದ ನಿರ್ಮಾಪಕ ವಿಖ್ಯಾತ್ ಈಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪ್ರೆಸ್ ನೋಟ್ ರಿಲೀಸ್ ಮಾಡಿರುವ ವಿಖ್ಯಾತ್, ಈ ಆಡಿಯೋದಲ್ಲಿರುವ ಧ್ವನಿ ನನ್ನದೆ ಆದರೆ ಆಡಿಯೋವನ್ನು ತಾನು ಲೀಕ್ ಮಾಡಿಲ್ಲ ಎಂದು ಹೇಳಿದ್ದಾರೆ.
ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ
'ದಿನಾಂಕ 9.2.2021ರಂದು ಜಗ್ಗೇಶ್ ರವರು 8.30ರ ಸುಮಾರಿಗೆ ನನಗೆ ಫೋನ್ ಕಾಲ್ ಮಾಡಿ ಮಾತನಾಡುತ್ತಾರೆ. ಆ ಪೋನ್ ಕಾಲ್ ಈಗ ಎಲ್ಲಡೆ ವೈರಲ್ ಆಗಿದ್ದು, ಆಡಿಯೋ ಕ್ಲಿಪ್ ನಲ್ಲಿರುವ ಧ್ವನಿ ಆ ಕಡೆ ಜಗ್ಗೇಶ್ ರವರದ್ದಾಗಿದ್ದು, ಈ ಕಡೆಯ ಧ್ವನಿ ನನ್ನದಾಗಿರುತ್ತದೆ. ಆ ಫೋನ್ ಕಾಲ್ ಅನ್ನು ನಾನು ರೇಕಾರ್ಡ್ ಮಾಡಿದ್ದಾಗಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಟ್ಟಿದ್ದಾಗಲಿ ಮಾಡಿರುವುದಿಲ್ಲ ಎಂದು ಆ ದೇವರ ಮೇಲೆ ಪ್ರಮಾಣಿಕರಿಸುತ್ತೇನೆ.
ಈ ಬಗ್ಗೆ ಸಂಪೂರ್ಣ ತನಿಖೆ ಆಗಲಿ
'ಈ ಆಡಿಯೋ ಕ್ಲಿಪ್ ಹೇಗೆ ಹಂಚಿಕೆಯಾಯಿತು ಮತ್ತು ಯಾರಿಂದ ಆಯಿತು ಎನ್ನುವುದರ ಬಗ್ಗೆ ಪರಿಪೂರ್ಣ ಮಟ್ಟದ ತನಿಖೆ ಆಗಲಿ, ನನ್ನ ಸಂಪೂರ್ಣ ಸಹಕಾರವಿದೆ'
ಜಗ್ಗೇಶ್ ಅವರ ಮಾತುಗಳಿಗೆ ಅವರೇ ಜವಾಬ್ದಾರರು
'ಆಡಿಯೋ ಕ್ಲಿಪ್ ನಲ್ಲಿ ನಾನು ಮಾತನಾಡಿರುವುದರ ಬಗ್ಗೆ ನನಗೆ ತಿಳುವಳಿಕೆ ಇದೆ. ಜಗ್ಗೇಶ್ ಅವರ ಮಾತುಗಳಿಗೆ ಅವರೇ ಜವಾಬ್ದಾರರು. ಜಗ್ಗೇಶ್ ಅವರು ಟ್ವಿಟ್ಟರ್ ಮೂಲಕ ಸೂಚ್ಯವಾಗಿ ಆಪಾದಿಸಿದ್ದಂತೆ, ಈ ಆಡಿಯೋ ಕ್ಲಿಪ್ ಅನ್ನು, ನನ್ನ ಚಿತ್ರದ ಪ್ರಚಾರಕ್ಕಾಗಿ ಬಳಸಿದ್ದೇನೆ ಎಂಬ ಹೇಳಿಕೆಯನ್ನು, ನಾನು ಸ್ಪಷ್ಟವಾಗಿ ಈ ಪತ್ರದ ಮೂಲಕ ಅಲ್ಲಗಳೆಯುತ್ತೇನೆ'ಎಂದಿದ್ದಾರೆ.
ವಿಖ್ಯಾತ್ ನಿರ್ಮಾಣದ ರಂಗನಾಯಕ ಸಿನಿಮಾದಲ್ಲಿ ಜಗ್ಗೇಶ್ ನಾಯಕ
'ನವರಸ ನಾಯಕ ಜಗ್ಗೇಶ್ ಮತ್ತು ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ ರಂಗನಾಯಕ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯ ಮುಗಿದಿದ್ದು, ಶೂಟಿಂಗ್ ಆರಂಭಿಸುವ ಪ್ರಕ್ರಿಯೆಯಲ್ಲಿ ಇದ್ದೇನೆ. ತಮ್ಮೆಲ್ಲರ ಬೆಂಬಲವಿರಲಿ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನನ್ನ ನಿರ್ಮಾಣದ ಇನ್ಸ್ ಪೆಕ್ಟರ್ ವಿಕ್ರಂ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಮ್ಮ ಕರೆಗೆ ಓಗೊಟ್ಟು ಬಂದು ನಟಿಸಿ ಸಹಕರಿಸಿದ್ದಾರೆ. ಅವರ ಮತ್ತ ಅವರ ಅಭಿಮಾನಿಗಳ ಬಗ್ಗೆ ಯಾವತ್ತಿಗೂ ಗೌರವವಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ.ಎಲ್ಲಕ್ಕಿಂತ ಮುಖ್ಯವಾಗಿ ಈ ರೀತಿಯ ಆಡಿಯೋ ಕ್ಲಿಪ್ ಬಹಿರಂಗ ಗೊಳಿಸುವ ಚೀಪ್ ಪ್ರಚಾರ ತಂತ್ರಗಳನ್ನು ಬಳಸುವ ಹುನ್ನಾರ ನಾನು ಮಾಡಿಲ್ಲವೆಂದು ಪ್ರಮಾಣಿಕರಿಸುತ್ತೇನೆ' ಎಂದು ಪ್ರೆಸ್ ನೋಟ್ ರಿಲೀಸ್ ಮಾಡಿದ್ದಾರೆ.