Don't Miss!
- Lifestyle 2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
- News DV Sadananda Gowda: ಕಮಲ ಬಿಟ್ಟು ಕೈ ಹಿಡಿಯುತ್ತಾರಾ ಸದಾನಂದಗೌಡರು: ಡಿ ಕೆ ಶಿವಕುಮಾರ್ ಏನಂದ್ರು?
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Sports IPL 2024: ಗಾಯದ ಕಾರಣದಿಂದ ಆಟಗಾರ ಲೀಗ್ನಿಂದ ಹೊರ ನಡೆದರೆ ಸಿಗುವ ಹಣವೆಷ್ಟು?
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ಕುಮಾರ್– ಸಿಂಪಲ್ ಸುನಿ ಸಿನಿಮಾದಲ್ಲಿ ಕಮಲ್ ಹಾಸನ್ ಸಿನಿಮಾದ ನಟಿ ಸ್ವತಿಷ್ಠ ಕೃಷ್ಣನ್
ವಿನಯ್ ರಾಜ್ಕುಮಾರ್ ಹೊಸ ಸಿನಿಮಾಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಮುಹೂರ್ತ ನಡೆದಿದ್ದು, ಶೂಟಿಂಗ್ ಕೆಲಸಗಳು ಜೋರಾಗಿಯೇ ಆರಂಭ ಆಗಿದೆ.
ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಸಿನಿಮಾಗೆ ತಮಿಳು ಸಿನಿಮಾಗಳ ನಾಯಕಿ ಆಯ್ಕೆ ಮಾಡಲಾಗಿದೆ. ಇದೊಂದು ಪಕ್ಕಾ ಮ್ಯೂಸಿಕಲ್ ಲವ್ ಸ್ಟೋರಿ. ಒಂದು ಸರಳ ಪ್ರೇಮಕಥೆಯನ್ನಾಧರಿಸಿದ ಈ ಚಿತ್ರಕ್ಕೆ ಕಮಲ್ ಹಾಸನ್ ಜೊತೆ 'ವಿಕ್ರಮ್' ಸಿನಿಮಾದಲ್ಲಿ ನಟಿಸಿದ್ದ ನಟಿ ಸ್ವತಿಷ್ಠ ಕೃಷ್ಣನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.
ವಿನಯ್ ರಾಜ್ ಕುಮಾರ್, ಸಿಂಪಲ್ ಸುನಿ ಸಿನಿಮಾ ಒಂದು ಸರಳ ಪ್ರೇಮಕಥೆಯಾಗಿರುವುದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಂದ್ಹಾಗೆ ತಮಿಳು ನಟಿ ಸ್ವತಿಷ್ಠ ಕೃಷ್ಣನ್ ಧಾರವಾಡ ಮೂಲದ ಕನ್ನಡತಿ. ಈಗಾಗಲೇ ಸ್ವತಿಷ್ಠ ಕೃಷ್ಣನ್ ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಈಗ ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ.
ಸ್ವತಿಷ್ಠ ಕೃಷ್ಣನ್ ತಮಿಳಿನ ಉರಗನಾಯಗನ್ ಕಮಲ್ ಹಾಸನ್ ನಟನೆಯ 'ವಿಕ್ರಮ್' ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದರು. ಈಗ ವಿನಯ್ ರಾಜ್ ಕುಮಾರ್ ನಾಯಕಿಯಾಗಿ ಸ್ಯಾಂಡಲ್ವುಡ್ಗೆ ಕಾಲಿಡುತ್ತಿದ್ದಾರೆ.
ಸಿಂಪಲ್ ಸುನಿ ನಿರ್ದೇಶಿಸೋ ಸಿನಿಮಾಗಳಲ್ಲಿ ಕನ್ನಡದ ನಾಯಕಿಯರೇ ಇರುತ್ತಾರೆ. ಈ ಬಾರಿ ಕೂಡ ವಿನಯ್ ಕುಮಾರ್ ಸಿನಿಮಾಗೆ ಕನ್ನಡದ ನಾಯಕಿಯನ್ನೇ ಕರೆದುಕೊಂಡು ಬಂದಿದ್ದಾರೆ. "ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು ಅವರು ಕೂಡ ಕಥೆ ಕೇಳಿ ಓಕೆ ಮಾಡಿ ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆ" ಎಂದು ಸಿಂಪಲ್ ಸುನಿ ತಿಳಿಸಿದ್ದಾರೆ.
ಈ ಸಿನಿಮಾಗೆ ಪ್ರಸನ್ನ ಕಥೆ ಬರೆದಿದ್ದಾರೆ. ಇನ್ನು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಸಿಂಪಲ್ ಸುನಿ ಹೊತ್ತುಕೊಂಡಿದ್ದಾರೆ. ಸದ್ಯ ಈ ಸಿನಿಮಾ ಪ್ರಿ ಪ್ರೊಡಕ್ಷನ್ ಕೆಲಸ ಬಾರೀ ಜೋರಾಗಿ ನಡೆಯುತ್ತಿದೆ. ಉಳಿದ ತಾರಾಗಣದ ಬಗ್ಗೆ ಶೀಘ್ರದಲ್ಲಿಯೇ ಚಿತ್ರತಂಡ ಮಾಹಿತಿ ನೀಡಲಿದ್ದು, ಮೈಸೂರು ರಮೇಶ್ ನಿರ್ಮಾಣ ಮಾಡುತ್ತಿದ್ದಾರೆ. ಹಾಗೇ ವೀರ್ ಸಮರ್ಥ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.