Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ದ್ವಿತೀಯ ಪುತ್ರ ವಿಕ್ರಮನ 'ತ್ರಿವಿಕ್ರಮ' ಬಿಡುಗಡೆಗೆ ಮುಹೂರ್ತ
ಕೋವಿಡ್ನಿಂದಾಗಿ ಕಂಗಲಾಗಿದ್ದ ಸ್ಯಾಂಡಲ್ವುಡ್ ಮತ್ತೆ ಚೇತರಿಸಿಕೊಂಡಿದ್ದು, ಈ ವರ್ಷದ ಆರಂಭದಲ್ಲೇ ಸ್ಟಾರ್ ನಟರ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈಗ ಚಂದನವನದಲ್ಲಿ ಪ್ರೀತಿಯ ಸಿಂಚನ ಮೂಡಿಸಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯಿಸಿರುವ 'ತ್ರಿವಿಕ್ರಮ' ಚಿತ್ರದ ರಿಲೀಸ್ ಡೇಟ್ ಅನ್ನು ಇಂದು (ಮೇ 10) ಚಿತ್ರತಂಡ ಘೋಷಣೆ ಮಾಡಿದೆ.
ಇಂದು (ಮೇ 10) 'ತ್ರಿವಿಕ್ರಮ' ಚಿತ್ರತಂಡ ಸುದ್ದಿಗೋಷ್ಟಿ ಕರೆದು ಸಿನಿಮಾ ಬಿಡುಗಡೆಯಾಗುವ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಇದೇ ಜೂನ್ 24 ರಂದು ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿದೆ. ಸುದ್ದಿಗೋಷ್ಟಿಯಲ್ಲಿ ನಟಿ ತಾರಾ, ಸಾಧುಕೋಕಿಲಾ, ಮನುರಂಜನ್, ಶರಣ್, ನಟ ವಿಕ್ರಮ್ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು.
ರವಿಚಂದ್ರನ್ ಮಗ ವಿಕ್ರಮ್ ಮೊದಲ ಸಿನಿಮಾದ ನಿರೀಕ್ಷೆ ಕಂಡು ಭಯ ಆಗ್ತಿದೆ
'ತ್ರಿವಿಕ್ರಮ' ಸಿನಿಮಾ ಕೋವಿಡ್ ಕಾಲದಲ್ಲಿಯೇ ಸಿನಿಮಾ ಸೆಟ್ ಏರಿ ಚಿತ್ರೀಕರಣವೂ ನಡೆದಿತ್ತು. ಇನ್ನೇನು ಸಿನಿಮಾವನ್ನು ಥಿಯೇಟರ್ಗೆ ಬಿಡುವ ಹೊತ್ತಿಗೆ ಕೊರೊನಾ ಎರಡನೇ ಅಲೆ ಪ್ರಮಾಣ ಹೆಚ್ಚಾದ್ದರಿಂದ ಸಿನಿಮಾ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಸದ್ಯ ಈಗ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ರವಿಚಂದ್ರನ್ ಪುತ್ರ ವಿಕ್ರಮ್ಗೆ ಇದು ಮೊದಲ ಸಿನಿಮಾವಾಗಿದೆ. ಈಗಾಗಲೇ ಸಿನಿಮಾದ ಹಾಡು, ಟ್ರೈಲರ್ಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಅದರಲ್ಲೂ 'ಪ್ಲೀಸ್ ಮಮ್ಮಿ' ಹಾಡಂತೂ ಯೂಟ್ಯೂಬ್ನಲ್ಲಿ ಭಾರೀ ವೀವ್ಸ್ ಪಡೆದುಕೊಂಡಿತ್ತು. ಅಲ್ಲದೆ ಹಾಡಿನಲ್ಲೂ ವಿಕ್ರಮ್ ನಟನೆ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಹೀಗಾಗಿ ಸಿನಿಮಾ ಮೇಲಿನ ನಿರೀಕ್ಷೆಯೂ ಕೂಡ ಹೆಚ್ಚಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಸಿನಿಮಾ 'ತ್ರಿವಿಕ್ರಮ' ಆಗಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಥಿಯೇಟರ್ಗೆ ಬಂದು ಸಿನಿಮಾ ನೋಡಬೇಕು ಅಂತ ಚಿತ್ರತಂಡ ಮನವಿ ಮಾಡಿಕೊಂಡಿದೆ. ಅಲ್ಲದೆ ಮನೋರಂಜನ್ ನಟನೆಯ 'ಪ್ರಾರಂಭ' ಸಿನಿಮಾ ಕೂಡ ಇನ್ನು ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ಹೀಗಾಗಿ ರವಿಚಂದ್ರನ್ಗೆ ಡಬಲ್ ಧಮಾಕ ಸಿಕ್ಕಂತಾಗಿದೆ.
'ತ್ರಿವಿಕ್ರಮ' ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಇದ್ದು, ಸಂತೋಷ್ ರೈ ಛಾಯಾಗ್ರಹಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಆಡಿಯೋ ರೈಟ್ಸ್ ದೊಡ್ಡ ಮೊತ್ತಕ್ಕೆ ಸೇಲ್ ಆಗಿದೆ ಎಂದು ಸುದ್ದಿಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿದೆ.
ತೆರೆಮೇಲೆ ತಂದೆ-ಮಗನ ಜುಗಲ್ ಬಂದಿ: ವಿಕ್ರಮ್ ಹೊಸ ಸಿನಿಮಾದಲ್ಲಿ ದೊಡ್ಡ ಬದಲಾವಣೆ
ಕೇಜ್ರಿಸ್ಟಾರ್ ರವಿಚಂದ್ರನ್ ಮಗನ ಮದುವೆ ಆಮಂತ್ರಣ ಪತ್ರಿಕೆ ವೈರಲ್? ಪತ್ರಿಕೆಯಲ್ಲಿ ಅಂಥದ್ದೇನಿದೆ ?