Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಬಿಡುಗಡೆಗೆ 20 ದಿನ ಮುನ್ನ ಕೊನೆಯ ಸಾಂಗ್ ಶೂಟ್ ಮುಗಿಸಿದ 'ತ್ರಿವಿಕ್ರಮ್'!
ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ಗೋಸ್ಕರ್ ಅಖಾಡ ರೆಡಿಯಾಗಿದೆ. 'ತ್ರಿವಿಕ್ರಮ್' ಆಗಿ ವಿಕ್ರಮ್ ಥಿಯೇಟರ್ಗೆ ಲಗ್ಗೆ ಇಡುವುದಕ್ಕೆ ಸಜ್ಜಾಗಿದ್ದಾರೆ. ಒಂದ್ಕಡೆ ಸಿನಿಮಾದ ಪ್ರಮೋಷನ್ ನಡೆಯುತ್ತಿದ್ದರೆ, ಇನ್ನೊಂದು ಕೊನೆಯ ಹಾಡಿನ ಶೂಟಿಂಗ್ ನಡೆಯುತ್ತಿತ್ತು.
ಅದ್ಧೂರಿ ಸೆಟ್ ಹಾಕಿ ತ್ರಿವಿಕ್ರಮ್ ಸಿನಿಮಾದ ಕೊನೆಯ ಹಾಡನ್ನು ಶೂಟ್ ಮಾಡಲಾಗಿದೆ. ಈ ಸದ್ಯ ಈ ಹಾಡಿನ ಚಿತ್ರೀಕರಣ ಮುಗಿದಿದ್ದು, ಇನ್ನು ಉಳಿದ ದಿನಗಳನ್ನು ಸಿನಿಮಾ ಪ್ರಚಾರಕ್ಕೆ ಮೀಸಲಿರಿಸಿದೆ. ಸದ್ಯ 'ತ್ರಿವಿಕ್ರಮ್' ಸಿನಿಮಾ ಬಗ್ಗೆ ಸ್ಯಾಂಡಲ್ವುಡ್ನಿಂದ ಹಿಡಿದು, ಕ್ರೇಜಿಸ್ಟಾರ್ ಅಭಿಮಾನಿಗಳವರೆಗೂ ನಿರೀಕ್ಷೆ ಬೆಟ್ಟದಷ್ಟಿದೆ.
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ಎಂಟ್ರಿ ನೋಡಲು ಸ್ಯಾಂಡಲ್ವುಡ್ ಕಾಯುತ್ತಿದೆ. ಅದಕ್ಕೆ ತಕ್ಕಂತೆ ಚಿತ್ರತಂಡ ಕೂಡ ಶತಪ್ರಯತ್ನ ನಡೆಸಿದೆ. ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಗೆಲ್ಲಲೇ ಬೇಕು ಪಣ ತೊಟ್ಟಿದೆ. ಆ ಕಾರಣಕ್ಕೆ ಇತ್ತೀಚೆಗೆ ಹಾಡಿನ ಚಿತ್ರೀಕರಣವನ್ನು ಅದ್ಧೂರಿಯಾಗಿ ನಡೆಸಿದೆ. ಈ ಹಾಡಿನ ಮೂಲಕ ಶೂಟಿಂಗ್ ಮುಗಿದಿದ್ದು, ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ'ನನ್ನ ನೋಡಬಹುದು.
ಅಂದ್ಹಾಗೆ, ಈ ಯಂಗ್ ಅಂಡ್ ಎನೆರ್ಜೆಟಿಕ್ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಈ ಹಾಡನ್ನು ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಬೃಹತ್ ಸೆಟ್ ಹಾಕಿ ರಂಗು ರಂಗಿನ ಕಾಸ್ಟ್ಯೂಮ್ಗಳಲ್ಲಿ ಶೂಟ್ ಮಾಡಲಾಗಿದೆ. ಅರ್ಜುನ್ ಜನ್ಯ ಈ ಹಾಡಿಗೆ ಟ್ಯೂನ್ ಹಾಕಿದ್ದು, ಭೂಷಣ್ ಕೊರಿಯೋಗ್ರಫಿ ಮಾಡಿದ್ದಾರೆ.
ವಿಕ್ರಮ್ ಹಾಗೂ ಆಕಾಂಕ್ಷಾ ಶರ್ಮಾ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನೂರಕ್ಕೂ ಅಧಿಕ ದಿನಗಳ ಕಾಲ ತ್ರಿವಿಕ್ರಮ್ ಸಿನಿಮಾದ ಶೂಟಿಂಗ್ ನಡೆಸಿರುವ ಬಿಗ್ ಬಜೆಟ್ ಸಿನಿಮಾವಿದು, ಈ ಕಾರಣಕ್ಕೆ ದೊಡ್ಡ ಮಟ್ಟದಲ್ಲಿಯೇ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಿದ್ಧತೆಗಳನ್ನು ಮಾಡಿಕೊಂಡಿದೆ.
ತ್ರಿವಿಕ್ರಮ್ ಸಿನಿಮಾಗೆ 'ರೋಸ್', 'ಮಾಸ್ ಲೀಡರ್' ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಸಹನಾ ಮೂರ್ತಿ 'ನಿರ್ದೇಶನ ಮಾಡಿದ್ದಾರೆ. ಸೋಮಣ್ಣ ರಾಮ್ಕೋ ಸೋಮಣ್ಣ ವಿಕ್ರಮ್ಗಾಗಿ ತ್ರಿವಿಕ್ರಮ್ ಸಿನಿಮಾಗೆ ಹಣ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಟ್ಯೂನ್ ಹಾಕಿದ್ದು, 'ಪ್ಲೀಸ್ ಮಮ್ಮಿ' ಹಾಡಿಗೆ ಸೂಪರ್ ರೆಸ್ಪಾನ್ಸ್ ಸಿಕ್ಕಿದ್ದು ಟ್ರೆಂಡಿಂಗ್'ನಲ್ಲಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ವಿಜಯಪ್ರಕಾಶ್ ಹಾಡಿದ್ದಾರೆ.
Recommended Video
ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮರಾವರ್ಕ್ ಈ ಸಿನಿಮಾಗಿದೆ.