Don't Miss!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- News ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರ: ಡಿ ಕೆ ಸುರೇಶ್ ಹೇಳಿದ್ದೇನು?
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರೂಪ್ ಭಂಡಾರಿ ಪೋಸ್ಟರ್: 'ವಿಕ್ರಾಂತ್ ರೋಣ' ಬೇಟೆಯ ಸುಳಿವು
'ರಂಗಿತರಂಗ' ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಿರೂಪ್ ಭಂಡಾರಿ ಈಗ ವಿಕ್ರಾಂತ್ ರೋಣ ಸಿನಿಮಾದಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ. ಕಿಚ್ಚ ಸುದೀಪ್ ನಾಯಕನಟನಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ನಿರೂಪ್ 'ಸಂಜೀವ್ ಗಂಭೀರ' ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ.
ನಿರೂಪ್ ಭಂಡಾರಿ ಹುಟ್ಟುಹಬ್ಬದ ವಿಶೇಷವಾಗಿ ಇಂದು (ಆಗಸ್ಟ್ 13) ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸಂಜೀವ್ ಗಂಭೀರ (ಸಂಜು) ಪಾತ್ರದ ಬಗ್ಗೆ ಒಂದಿಷ್ಟು ಸುಳಿವು ಈ ಪೋಸ್ಟರ್ನಲ್ಲಿ ಸಿಕ್ಕಿದೆ. ಇತ್ತೀಚಿಗಷ್ಟೆ ಜಾಕ್ವೆಲಿನ್ ಫರ್ನಾಂಡಿಸ್ ಅವರ 'ಗಡಂಗ್ ರಕ್ಕಮ್ಮನ' ಪಾತ್ರದ ಪೋಸ್ಟರ್ ಅನಾವರಣಗೊಳಿಸಲಾಗಿತ್ತು. ಅದರ ಹಿಂದೆಯೇ ನಿರೂಪ್ ಪಾತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಈ ಎರಡು ಪೋಸ್ಟರ್ನಲ್ಲಿ ಒಂದೇ ಸಾಮ್ಯತೆ ಇದೆ. ಬೇಟೆಗಾರ ಅಥವಾ ಹಂಟರ್ಗೆ ಈ ಇಬ್ಬರು ಬೇಕಾಗಿದ್ದಾರೆ. ಈಗ ಒಂದೊಂದೆ ಪಾತ್ರಗಳ ಪೋಸ್ಟರ್ ಬಹಿರಂಗವಾಗುತ್ತಿದ್ದು, ಚಿತ್ರದ ಥ್ರಿಲ್ ಹೆಚ್ಚಿಸುತ್ತಿದೆ.
'ಗದಂಗ್ ರಕ್ಕಮ್ಮ'ನ ಭರ್ಜರಿ ಎಂಟ್ರಿ: ಕಿಚ್ಚನ ಅಭಿಮಾನಿಗಳು ಫುಲ್ ಖುಷ್
ನಿರೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಶುಭಕೋರಿದ್ದಾರೆ. ಸಹೋದರ ಅನೂಪ್ ಭಂಡಾರಿ, ಕಿಚ್ಚ ಸುದೀಪ್, ಅಜನೀಶ್ ಲೋಕನಾಥ್, ಶೈನ್ ಶೆಟ್ಟಿ, ರಮೇಶ್ ಬಾಲ ಸೇರಿದಂತೆ ಹಲವರು ವಿಶ್ ಮಾಡಿದ್ದಾರೆ.
ಶ್ರೀಲಂಕಾ ಬ್ಯೂಟಿ ಜಾಕ್ವೆಲಿನ್ಗೆ ಕಿಚ್ಚ ಸುದೀಪ್ ವಿಶ್ ಮಾಡಿದ್ದು ಹೀಗೆ
ನಿರ್ದೇಶಕ ಸುಧಾಕರ್ ಭಂಡಾರಿ ಅವರ ಮಕ್ಕಳು ಅನೂಪ್ ಭಂಡಾರಿ ಮತ್ತು ನಿರೂಪ್ ಭಂಡಾರಿ. ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದ ಪ್ರೇಮದ ಕಾದಂಬರಿ ಧಾರಾವಾಹಿಯನ್ನು ಸುಧಾಕರ್ ಭಂಡಾರಿ ನಿರ್ದೇಶಿಸಿದ್ದರು. ನಿರೂಪ್-ಅನೂಪ್ ಇಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ಸಿನಿಮಾ ಮೇಕಿಂಗ್ನಲ್ಲಿ ಹೆಚ್ಚಿನ ತರಬೇತಿ ಪಡೆದುಕೊಂಡಿದ್ದಾರೆ. ಮುಂದೆ ಓದಿ...
'ರಂಗಿತರಂಗ' ಚಿತ್ರದೊಂದಿಗೆ ಸಹೋದರರ ಎಂಟ್ರಿ
2015ರಲ್ಲಿ 'ರಂಗಿತರಂಗ' ಸಿನಿಮಾ ಮೂಲಕ ನಿರೂಪ್ ನಾಯಕನಟನಾಗಿ, ಅನೂಪ್ ನಿರ್ದೇಶಕನಾಗಿ ಇಂಡಸ್ಟ್ರಿ ಪ್ರವೇಶಿಸಿದರು. ರಾಜಮೌಳಿಯ 'ಬಾಹುಬಲಿ' ಸಿನಿಮಾ ರಿಲೀಸ್ ಆದ ಸಂದರ್ಭದಲ್ಲಿ 'ರಂಗಿತರಂಗ' ಬಿಡುಗಡೆಯಾಗಿತ್ತು. ತೆಲುಗಿನ ಮೆಗಾ ಚಿತ್ರದ ಅಬ್ಬರದ ನಡುವೆ ರಂಗಿತರಂಗ ಗೆದ್ದು ಬೀಗಿತ್ತು. ಅವಂತಿಕಾ ಶೆಟ್ಟಿ, ರಾಧಿಕಾ ಚೇತನ್ ಹಾಗೂ ಸಾಯಿಕುಮಾರ್ ಈ ಚಿತ್ರದಲ್ಲಿ ಅಭಿನಯಿಸಿದ್ದರು.
'ರಂಗಿತರಂಗ' ಟು 'ರಾಜರಥ'
'ರಂಗಿತರಂಗ' ಯಶಸ್ಸಿನ ನಂತರ 'ರಾಜರಥ' ಸಿನಿಮಾ ಕೈಗೆತ್ತಿಕೊಂಡರು. ನಿರೂಪ್ ನಾಯಕ ಹಾಗೂ ಅನೂಪ್ ನಿರ್ದೇಶಕರಾಗಿ ಮಾಡಿದ ಎರಡನೇ ಚಿತ್ರ. ಚಿತ್ರೀಕರಣದ ಹಂತದಲ್ಲಿ ಈ ಸಿನಿಮಾ ಬಹಳ ಕುತೂಹಲ ಮೂಡಿಸಿತು. ತಮಿಳು ನಟ ಆರ್ಯ ಸಹ ವಿಶೇಷ ಪಾತ್ರವೊಂದರಲ್ಲಿ ಅಭಿನಯಿಸಿದರು. ಈ ಸಿನಿಮಾ ನಿರೀಕ್ಷೆಯಂತೆ ಸಕ್ಸಸ್ ಆಗಿಲ್ಲ. ಆಮೇಲೆ ಅಭಿಷೇಕ್ ಅಂಬರೀಶ್ ಮೊದಲ ಸಲ ನಟಿಸಿದ 'ಅಮರ್' ಚಿತ್ರದ ಹಾಡೊಂದರಲ್ಲಿ ನಿರೂಪ್ ಹೆಜ್ಜೆ ಹಾಕಿದ್ದರು.
ಕೈಹಿಡಿಯದ 'ಆದಿಲಕ್ಷ್ಮಿ ಪುರಾಣ'
ರಾಧಿಕಾ ಪಂಡಿತ್ ಕಂಬ್ಯಾಕ್ ಸಿನಿಮಾದಲ್ಲಿ ನಿರೂಪ್ ನಾಯಕನ ಪಾತ್ರ ಮಾಡುವ ಮೂಲಕ ಗಮನ ಸೆಳೆದರು. ಮದುವೆ ಆದ್ಮೇಲೆ ರಾಧಿಕಾ ಪಂಡಿತ್ ಯಾವ ಸಿನಿಮಾದಲ್ಲೂ ನಟಿಸಿರಲಿಲ್ಲ. 2019ರಲ್ಲಿ ರಾಕ್ಲೈನ್ ವೆಂಕಟೇಶ್ ನಿರ್ಮಾಣದ 'ಆದಿಲಕ್ಷ್ಮಿ ಪುರಾಣ' ಸಿನಿಮಾದಲ್ಲಿ ಕಂಬ್ಯಾಕ್ ಮಾಡಿದರು. ನಿರೀಕ್ಷೆಯಂತೆ ಸಕ್ಸಸ್ ಕಂಡಿಲ್ಲ. ಹೀಗೆ, ರಂಗಿತರಂಗ ಆದ್ಮೇಲೆ ನಿರೂಪ್ ಭಂಡಾರಿಗೆ ಒಂದೊಳ್ಳೆ ಬ್ರೇಕ್ ಸಿಕ್ಕಿಲ್ಲ. ಈಗ ಕಿಚ್ಚ ಸುದೀಪ್ ಜೊತೆ ವಿಕ್ರಾಂತ್ ರೋಣ ಸಿನಿಮಾ ಮಾಡ್ತಿದ್ದು, ಬಹುಶಃ ಇದು ನಿರೂಪ್ ಪಾಲಿಗೆ ಹೆಚ್ಚು ನಿರೀಕ್ಷೆ ಹುಟ್ಟಿಸಿದೆ.
'ವಿಂಡೋಸೀಟ್'ನಲ್ಲಿ ನಿರೂಪ್
ನಿರೂಪಕಿ ಶೀತಲ್ ಶೆಟ್ಟಿ ಚೊಚ್ಚಲ ಬಾರಿಗೆ ನಿರ್ದೇಶನ ಮಾಡ್ತಿರುವ 'ವಿಂಡೋಸೀಟ್' ಸಿನಿಮಾದಲ್ಲಿ ನಿರೂಪ್ ನಾಯಕರಾಗಿ ಅಭಿನಯಿಸಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ತಯಾರಾಗಿದ್ದು, ರಿಲೀಸ್ಗಾಗಿ ಕಾಯುತ್ತಿದೆ. 'ವಿಕ್ರಾಂತ್ ರೋಣ' ನಿರ್ಮಿಸಿರುವ ಜಾಕ್ ಮಂಜು ಅವರೇ ಈ ಚಿತ್ರಕ್ಕೂ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.