Don't Miss!
- News ಆಸ್ತಿ ವಿವರ ಘೋಷಿಸಿದ ಪ್ರಜ್ವಲ್ ರೇವಣ್ಣ: ದೊಡ್ಡಗೌಡರ ಮೊಮ್ಮಗ ಎಷ್ಟು ಕೋಟಿ ಒಡೆಯ ಗೊತ್ತಾ?
- Sports Virat Kohli vs Gautam Gambhir: ವಿರಾಟ್, ಗೌತಮ್ ನಡುವೆ ಬಿರುಕು ಹುಟ್ಟಲು ಕಾರವೇನು? ಇಲ್ಲಿದೆ ಮಾಹಿತಿ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರುಸ್ತುಂ' ಶಿವಣ್ಣನಿಗೆ ಖಡಕ್ ಖಳನಾಯಕ ಯಾರಾಗಬಹುದು.?
Recommended Video
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯಿಸಲಿರುವ 'ರುಸ್ತಂ' ಸಿನಿಮಾ ಅಣ್ಣಾವ್ರ ಹುಟ್ಟುಹಬ್ಬಕ್ಕೆ ಸೆಟ್ಟೇರಲಿದೆ. ಸಾಹಸ ನಿರ್ದೇಶಕ ರವಿವರ್ಮ ಆಕ್ಷನ್ ಕಟ್ ಹೇಳಲಿರುವ ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಖಡಕ್ ಪೊಲೀಸ್ ಆಫೀಸರ್ ಆಗಿ ಮಿಂಚಲಿದ್ದಾರೆ.
ಈಗಾಗಲೇ ಫೋಟೋಶೂಟ್ ಮುಗಿಸಿರುವ ಚಿತ್ರತಂಡ ಕಲಾವಿದರ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ, ಚಿತ್ರಕ್ಕಾಗಿ ಖಳನಾಯಕನ ಹುಡುಕಾಟ ಜೋರಾಗಿದೆ. ಶಿವಣ್ಣನ ಎದುರು ಖಡಕ್ ವಿಲನ್ ಬೇಕು ಎಂಬ ಕಾರಣಕ್ಕೆ ದೊಡ್ಡ ವಿಲನ್ ಒಬ್ಬರನ್ನ ಕರೆತರುವ ಪ್ರಯತ್ನ ಸಾಗುತ್ತಿದೆಯಂತೆ.
ತಮಿಳು, ತೆಲುಗು, ಹಿಂದಿ ಸಿನಿಮಾರಂಗದಲ್ಲಿ ಕೆಲಸ ಮಾಡಿರುವ ರವಿವರ್ಮ ಎಲ್ಲ ಭಾಷೆಯಲ್ಲಿಯೂ ವಿಲನ್ ಗಾಗಿ ಹುಡುಕುತ್ತಿದ್ದಾರಂತೆ. ಬಾಲಿವುಡ್ ಸ್ಟಾರ್ ನಟರಾದ ಅನಿಲ್ ಕಪೂರ್, ಸಂಜಯ್ ದತ್, ಸುನೀಲ್ ಶೆಟ್ಟಿ, ಮನೋಜ್ ಬಾಜಪೇಯಿ ಸೇರಿದಂತೆ ಹಲವರಿಗೆ ಕಥೆ ಹೇಳಿದ್ದರಂತೆ. ಇವರೆಲ್ಲರಿಗೂ ಕಥೆ ಇಷ್ಟವಾಗಿದ್ದರೂ, ಡೇಟ್ ಸಮಸ್ಯೆಯಾಗುತ್ತಿದೆಯಂತೆ.
ಹೀಗಾಗಿ, ವಿಲನ್ ಯಾರೂ ಎಂಬುದು ಇನ್ನು ಅಂತಿಮವಾಗಿಲ್ಲ. ಇನ್ನುಳಿದಂತೆ ಜಯಣ್ಣ-ಭೋಗೇಂದ್ರ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಏಪ್ರಿಲ್ 24ರಂದು ಸೆಟ್ಟೇರಲಿದ್ದು, ಮೇ 10ರಿಂದ ಚಿತ್ರೀಕರಣ ಶುರುವಾಗಲಿದೆ. ಬೆಂಗಳೂರು, ಬಿಹಾರ ಸೇರಿದಂತೆ ದೇಶದ ಹಲವೆಡೆ ಚಿತ್ರೀಕರಣ ನಡೆಯಲಿದೆ.
ಸದ್ಯ, ಶಿವರಾಜ್ ಕುಮಾರ್ ಅವರು 'ಕವಚ' ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಮಲಯಾಳಂ ಭಾಷೆಯ 'ಒಪ್ಪಂ' ಚಿತ್ರದ ರೀಮೇಕ್ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಕುರುಡನ ಪಾತ್ರ ನಿಭಾಯಿಸುತ್ತಿದ್ದಾರೆ.