Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ನಾಯಕಿಯಾಗಿ ಅದಿತಿ ಪ್ರಭುದೇವ
ಡಾ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ 'ಅದೊಂದಿತ್ತು ಕಾಲ' ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ವಿನಯ್ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ.
ಈ ಚಿತ್ರಕ್ಕೆ ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ.
ವಿಡಿಯೋ ವೈರಲ್; ಆಟೋ ಓಡಿಸಿದ ನಟಿ ಅದಿತಿ ಪ್ರಭುದೇವ
ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ನಲ್ಲಿ ಪುಟ್ಟ ಹುಡುಗನೊಬ್ಬ ಗಾಳಿಪಟ ಹಾರಿಸುವಂತೆ ಕಾಣಿಸಿಕೊಂಡಿದ್ದಾರೆ. ''ಹೃದಯ ತುಂಬಾ ಅಳುವಿದೆ. ನಗುವಷ್ಟು ಅದೃಷ್ಟವಂತನಲ್ಲ. ಮರೆಯಾದ ನಗುವಿನಲ್ಲಿ ನಗುವಿಲ್ಲದ ನೋವಿನಲ್ಲಿ ನಾ ನಿನ್ನ ಸೆರೆಯಾಗುವೆ....ಓ ಬಾಲ್ಯವೇ ನೀ ಮತ್ತೆ ಬಂದು ಬಿಡು, ನನ್ನ ಮತ್ತೆ ಮಗುವಾಗಿಸು-ಕುಮಾರ'' ಎಂದು ಕವನ ಪೋಸ್ಟರ್ನಲ್ಲಿ ಗಮನ ಸೆಳೆಯುತ್ತಿದ್ದು, ಚಿತ್ರ ಕಥೆಯ ಬಗ್ಗೆ ಸುಳಿವು ನೀಡುವಂತಿದೆ.
ಭುವನ್, ಲೋಕೇಶ್, ಶಿವಣ್ಣ ಎಸ್ ಜಂಟಿಯಾಗಿ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಅಭಿಷೇಖ್ ಜಿ ಕಾಸರಗೋಡು, ಅವರ ಛಾಯಾಗ್ರಹಣ ಹಾಗೂ ರಾಘವೇಂದ್ರ ವಿ ಸಂಗೀತ ಒದಗಿಸಿದ್ದಾರೆ.
ಅಂದ್ಹಾಗೆ, ಈ ಚಿತ್ರದಲ್ಲಿ ಸ್ಟಾರ್ ನಟರೊಬ್ಬರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಆದರೆ, ಸದ್ಯಕ್ಕೆ ಆ ನಟ ಯಾರು ಎನ್ನುವುದು ಗೌಪ್ಯವಾಗಿದೆ.
Recommended Video