Don't Miss!
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ನಾಯಕಿಯಾಗಿ ಅದಿತಿ ಪ್ರಭುದೇವ
ಡಾ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ 'ಅದೊಂದಿತ್ತು ಕಾಲ' ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ವಿನಯ್ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ.
ಈ ಚಿತ್ರಕ್ಕೆ ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ.
ವಿಡಿಯೋ ವೈರಲ್; ಆಟೋ ಓಡಿಸಿದ ನಟಿ ಅದಿತಿ ಪ್ರಭುದೇವ
ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ನಲ್ಲಿ ಪುಟ್ಟ ಹುಡುಗನೊಬ್ಬ ಗಾಳಿಪಟ ಹಾರಿಸುವಂತೆ ಕಾಣಿಸಿಕೊಂಡಿದ್ದಾರೆ. ''ಹೃದಯ ತುಂಬಾ ಅಳುವಿದೆ. ನಗುವಷ್ಟು ಅದೃಷ್ಟವಂತನಲ್ಲ. ಮರೆಯಾದ ನಗುವಿನಲ್ಲಿ ನಗುವಿಲ್ಲದ ನೋವಿನಲ್ಲಿ ನಾ ನಿನ್ನ ಸೆರೆಯಾಗುವೆ....ಓ ಬಾಲ್ಯವೇ ನೀ ಮತ್ತೆ ಬಂದು ಬಿಡು, ನನ್ನ ಮತ್ತೆ ಮಗುವಾಗಿಸು-ಕುಮಾರ'' ಎಂದು ಕವನ ಪೋಸ್ಟರ್ನಲ್ಲಿ ಗಮನ ಸೆಳೆಯುತ್ತಿದ್ದು, ಚಿತ್ರ ಕಥೆಯ ಬಗ್ಗೆ ಸುಳಿವು ನೀಡುವಂತಿದೆ.
ಭುವನ್, ಲೋಕೇಶ್, ಶಿವಣ್ಣ ಎಸ್ ಜಂಟಿಯಾಗಿ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಅಭಿಷೇಖ್ ಜಿ ಕಾಸರಗೋಡು, ಅವರ ಛಾಯಾಗ್ರಹಣ ಹಾಗೂ ರಾಘವೇಂದ್ರ ವಿ ಸಂಗೀತ ಒದಗಿಸಿದ್ದಾರೆ.
ಅಂದ್ಹಾಗೆ, ಈ ಚಿತ್ರದಲ್ಲಿ ಸ್ಟಾರ್ ನಟರೊಬ್ಬರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಆದರೆ, ಸದ್ಯಕ್ಕೆ ಆ ನಟ ಯಾರು ಎನ್ನುವುದು ಗೌಪ್ಯವಾಗಿದೆ.
Recommended Video