Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನಯ್ ರಾಜ್ ಕುಮಾರ್ ಸಿನಿಮಾಗೆ ತಾತನ ಚಿತ್ರದ ಟೈಟಲ್
'ದಾರಿ ತಪ್ಪಿದ ಮಗ' ಸಿನಿಮಾದ ಟೈಟಲ್ ನಲ್ಲಿ ಈಗಾಗಲೇ ರಾಜ್ ಮೊಮ್ಮಗ ಧೀರನ್ ರಾಜ್ಕುಮಾರ್ ಸಿನಿಮಾ ಮಾಡುತ್ತಿದ್ದಾರೆ. ಈಗ ಮತ್ತೊಬ್ಬ ಮೊಮ್ಮಗ ವಿನಯ್ ರಾಜ್ ಕುಮಾರ್ ಕೂಡ ತಾತನ ಚಿತ್ರದ ಹೆಸರನ್ನು ಇಟ್ಟುಕೊಂಡಿದ್ದಾರೆ.
ವಿನಯ್ ರಾಜ್ ಕುಮಾರ್ ಹೊಸ ಸಿನಿಮಾಗೆ 'ವೀರ ಕೇಸರಿ' ಎಂಬ ಟೈಟಲ್ ಇಡಲಾಗಿದೆ. ರಘು ವರ್ಧನ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಕಥೆಗೆ 'ವೀರ ಕೇಸರಿ' ಎನ್ನುವ ಹೆಸರು ತುಂಬ ಚೆನ್ನಾಗಿ ಹೋಲುತ್ತಿದ್ದು, ಅದೇ ಹೆಸರನ್ನು ಬಳಸಿಕೊಳ್ಳಲಾಗಿದೆಯಂತೆ.
ಶಿವಣ್ಣ, ಪುನೀತ್ ನಂತರ 'ಬಾಕ್ಸರ್' ಆದ ವಿನಯ್
ರಾಜ್ ಕುಮಾರ್ ನಟನೆಯ 'ವೀರ ಕೇಸರಿ' ಸಿನಿಮಾ 1963 ರಲ್ಲಿ ಬಿಡುಗಡೆಯಾಗಿತ್ತು. ರಾಜ್ ಕುಮಾರ್, ಟಿ ಎಸ್ ಬಾಲಕೃಷ್ಣ, ಉದಯ್ ಕುಮಾರ್ ಆ ನಾಗೇಂದ್ರ ರಾವ್ ಸಿನಿಮಾದಲ್ಲಿ ನಟಿಸಿದ್ದರು.
ಖ್ಯಾತ ನಿರ್ದೇಶಕ ವಿಠಲಾಚಾರ್ಯ ಚಿತ್ರದ ನಿರ್ದೇಶನ ಮಾಡಿದ್ದರು. ಶೇಕ್ಸ್ ಪಿಯರ್ ಬರೆದಿರುವ 'ಟೇಮಿಂಗ್ ಆಫ್ ದಿ ಶ್ರ್ಯೂ' ಕೃತಿ ಆಧಾರಿಸಿ ಈ ಸಿನಿಮಾ ಮಾಡಲಾಗಿತ್ತು.
ಇಂತಹ 'ವೀರ ಕೇಸರಿ' ಚಿತ್ರದ ಹೆಸರನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದರೂ, ಹಳೆ ಚಿತ್ರಕ್ಕೂ ಇದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ನಿರ್ದೇಶಕ ರಘುವರ್ಧನ್ ತಿಳಿಸಿದ್ದಾರೆ.