Don't Miss!
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟ ವಿನೋದ್ ಪ್ರಭಾಕರ್ ಕಣ್ಣಿಗೆ ಬಲವಾದ ಪೆಟ್ಟು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಮಂಗಳವಾರ (ಜು.31) ಈ ಘಟನೆ ನಡೆದಿದೆ. 'ಗಜೇಂದ್ರ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಡೆಯುತ್ತಿತ್ತು. ಆಗ ಅವರ ಎಡಗಣ್ಣಿನ ಹುಬ್ಬಿಗೆ ಬಲವಾದ ಪೆಟ್ಟುಬಿತ್ತು.
ಕೂಡಲೆ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಕಣ್ಣಿನ ಹುಬ್ಬಿನ ಭಾಗದಲ್ಲಿ ಮೂರು ಹೊಲಿಗೆಗಳನ್ನು ಹಾಕಲಾಗಿದ್ದು ಪ್ಲಾಸ್ಟಿಕ್ ಸರ್ಜರಿಯನ್ನೂ ಮಾಡಲಾಗಿದೆ. ಪೆಟ್ಟು ಬಿದ್ದ ರಭಸಕ್ಕೆ ಅವರ ಕಣ್ಣಿನ ಭಾಗ ಊದಿಕೊಂಡಿತ್ತು.
ಆದರೂ ಅವರು ಚಿತ್ರೀಕರಣಕ್ಕೆ ಬಂದಿದ್ದು ಚಿತ್ರತಂಡದ ಹುಬ್ಬೇರಿಸಿತ್ತು. ಒಂದು ವಾರ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ವಿನೋದ್ ಪ್ರಭಾಕರ್ ಅವರಿಗೆ ಸೂಚಿಸಿದ್ದಾರೆ. ಹಾಗಾಗಿ ಇಂದಿನ ಚಿತ್ರೀಕರಣಕ್ಕೆ ಪ್ಯಾಕಪ್ ಹೇಳಲಾಯಿತು.
'ಹೋರಿ' ಚಿತ್ರದ ಬಳಿಕ ಸಾಕಷ್ಟು ಗ್ಯಾಪ್ ತೆಗೆದುಕೊಂಡಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಜೆಜೆ ಕೃಷ್ಣ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ. ಸ್ಲಂ ಹುಡುಗನಾಗಿ ಬಳಿಕ ಎಂಎಲ್ ಎ ಆಗಿ ವಿನೋದ್ ಅವರದು ಈ ಚಿತ್ರದಲ್ಲಿ ದ್ವಿಪಾತ್ರಾಭಿನಯ. ಭ್ರಷ್ಟ ಪೊಲೀಸ್ ಅಧಿಕಾರಿಯಾಗಿ ಶೋಭರಾಜ್ ಅಭಿನಯಿಸುತ್ತಿದ್ದಾರೆ.
ಡೈಸಿ ಶಾ ಹಾಗೂ ಸ್ವಾತಿ ಚಿತ್ರದ ಇಬ್ಬರು ನಾಯಕಿಯರು. ರಾಜೇಶ್ ರಾಮನಾಥ್ ಅವರ ಸಂಗೀತವಿರುವ ಚಿತ್ರಕ್ಕೆ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಐಹೊಳೆ ಹಾಗೂ ಪಟ್ಟದಕಲ್ಲಿನ ಐತಿಹಾಸಿಕ ಪ್ರದೇಶಗಳಲ್ಲಿ ಹಾಡುಗಳನ್ನು ಚಿತ್ರೀಕರಿಸಲಾಗಿದೆ. (ಏಜೆನ್ಸೀಸ್)